AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕೆಎಸ್​ಒಯು ಸುತ್ತೋಲೆ ಹೊರಡಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ನಿರಾಶೆಗೊಂಡಿದ್ದಾರೆ.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು
ಕರ್ನಾಟಕ ರಾಜ್ಯ ಮುಕ್ತ ವಿಶ್ವಾವಿದ್ಯಾಲಯ
Follow us
TV9 Web
| Updated By: Rakesh Nayak Manchi

Updated on: Jun 30, 2022 | 11:18 AM

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುತ್ತೋಲೆ (Circular) ಹೊರಡಿಸಿದೆ. ಈ ನಿರ್ಧಾರದಿಂದಾಗಿ ವಿವಿಧ ಕೋರ್ಸ್​ಗಳಿಗೆ ಪ್ರವೇಶ ಕೋರಿರುವ ವಿದ್ಯಾರ್ಥಿಗಳಿಗೆ ನಿರಾಶೆಯಾಗಿದೆ.

2021-22ನೇ ಶೈಕ್ಷಣಿಕ ಸಾಲಿನ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್​ ಕಾಪಿಗಳನ್ನು ನೀಡಲಾಗುವುದಿಲ್ಲ, ಸಾಫ್ಟ್​ ಕಾಪಿಗಳನ್ನೇ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಸುತ್ತೋಲೆ ಹೊರಡಿಸಿದೆ. ಇದರ ಜೊತೆಗೆ ವಿವಿಧ ಕೋರ್ಸ್​ಗಳ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಭರವಸೆ ನೀಡಿದ್ದು, ಇದು ಹಾರ್ಡ್ ಕಾಪಿಗಳನ್ನು ಪಡೆಯಲು ವಿದ್ಯಾರ್ಥಿಗಳ ವೆಚ್ಚವನ್ನು ಸರಿಹೊಂದಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

ಅಧ್ಯಯನ ಸಾಮಗ್ರಿಗಳ ಸಾಫ್ಟ್​ ಕಾಪಿಗಳನ್ನು student app ನಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಕಾಪಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ವಿವಿಯ ಈ ನಿರ್ಧಾರಕ್ಕೆ ಹಲವು ನಿರಾಶೆ ವ್ಯಕ್ತಪಡಿಸಿದ್ದಾರೆ.

”ಸ್ಟಡಿ ಮೆಟೀರಿಯಲ್ ಸೇರಿದಂತೆ ಕೋರ್ಸ್ ಶುಲ್ಕವಾಗಿ 9 ಸಾವಿರ ಪಾವತಿಸಿದ್ದೇನೆ. ಪ್ರತಿ ವಿಷಯದಲ್ಲಿ ಐದರಿಂದ ಆರು ಇ-ಪುಸ್ತಕಗಳಿವೆ. ಸಾಫ್ಟ್ ಕಾಪಿಗಳನ್ನು ಈಗ ಇತರ ವಿದ್ಯಾರ್ಥಿಗಳ ಅಧ್ಯಯನ ಸಾಮಗ್ರಿಗಳಿಂದ ಮುದ್ರಿಸಬೇಕು ಅಥವಾ ಫೋಟೋಕಾಪಿ ಮಾಡಬೇಕು. ಇದರಿಂದ ಸಾವಿರಾರು ರೂಪಾಯಿ ವೆಚ್ಚವಾಗಲಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹೊರೆಯಾಗಲಿದೆ. ವಿಶ್ವವಿದ್ಯಾಲಯದ ಈ ನಿರ್ಧಾರವು ಪರೀಕ್ಷಾ ಫಲಿತಾಂಶಗಳ ಮೇಲೆ ಮತ್ತು ವಿವಿಯ ಖ್ಯಾತಿಯ ಮೇಲೆ ಪರಿಣಾಮ ಬೀರಲಿದೆ” ಎಂದು ಪ್ರಾಥಮಿಕ ಶಿಕ್ಷಕರೊಬ್ಬರು ಹೇಳಿದ್ದಾಗಿ ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ ಮಾಡಿ ಆದೇಶ; ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ