AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕೆಎಸ್​ಒಯು ಸುತ್ತೋಲೆ ಹೊರಡಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ನಿರಾಶೆಗೊಂಡಿದ್ದಾರೆ.

KSOU: ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿಗಳನ್ನು ನೀಡಲು ನಿರ್ಧಾರ, ನಿರಾಶೆಗೊಂಡ ವಿದ್ಯಾರ್ಥಿಗಳು
ಕರ್ನಾಟಕ ರಾಜ್ಯ ಮುಕ್ತ ವಿಶ್ವಾವಿದ್ಯಾಲಯ
TV9 Web
| Edited By: |

Updated on: Jun 30, 2022 | 11:18 AM

Share

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್ ಕಾಪಿಗಳ ಬದಲು ಸಾಫ್ಟ್ ಕಾಪಿಗಳನ್ನು ಮಾತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುತ್ತೋಲೆ (Circular) ಹೊರಡಿಸಿದೆ. ಈ ನಿರ್ಧಾರದಿಂದಾಗಿ ವಿವಿಧ ಕೋರ್ಸ್​ಗಳಿಗೆ ಪ್ರವೇಶ ಕೋರಿರುವ ವಿದ್ಯಾರ್ಥಿಗಳಿಗೆ ನಿರಾಶೆಯಾಗಿದೆ.

2021-22ನೇ ಶೈಕ್ಷಣಿಕ ಸಾಲಿನ ವರ್ಷಕ್ಕೆ ಅಧ್ಯಯನ ಸಾಮಗ್ರಿಗಳ ಹಾರ್ಡ್​ ಕಾಪಿಗಳನ್ನು ನೀಡಲಾಗುವುದಿಲ್ಲ, ಸಾಫ್ಟ್​ ಕಾಪಿಗಳನ್ನೇ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಸುತ್ತೋಲೆ ಹೊರಡಿಸಿದೆ. ಇದರ ಜೊತೆಗೆ ವಿವಿಧ ಕೋರ್ಸ್​ಗಳ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಭರವಸೆ ನೀಡಿದ್ದು, ಇದು ಹಾರ್ಡ್ ಕಾಪಿಗಳನ್ನು ಪಡೆಯಲು ವಿದ್ಯಾರ್ಥಿಗಳ ವೆಚ್ಚವನ್ನು ಸರಿಹೊಂದಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

ಅಧ್ಯಯನ ಸಾಮಗ್ರಿಗಳ ಸಾಫ್ಟ್​ ಕಾಪಿಗಳನ್ನು student app ನಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಕಾಪಿಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ವಿವಿಯ ಈ ನಿರ್ಧಾರಕ್ಕೆ ಹಲವು ನಿರಾಶೆ ವ್ಯಕ್ತಪಡಿಸಿದ್ದಾರೆ.

”ಸ್ಟಡಿ ಮೆಟೀರಿಯಲ್ ಸೇರಿದಂತೆ ಕೋರ್ಸ್ ಶುಲ್ಕವಾಗಿ 9 ಸಾವಿರ ಪಾವತಿಸಿದ್ದೇನೆ. ಪ್ರತಿ ವಿಷಯದಲ್ಲಿ ಐದರಿಂದ ಆರು ಇ-ಪುಸ್ತಕಗಳಿವೆ. ಸಾಫ್ಟ್ ಕಾಪಿಗಳನ್ನು ಈಗ ಇತರ ವಿದ್ಯಾರ್ಥಿಗಳ ಅಧ್ಯಯನ ಸಾಮಗ್ರಿಗಳಿಂದ ಮುದ್ರಿಸಬೇಕು ಅಥವಾ ಫೋಟೋಕಾಪಿ ಮಾಡಬೇಕು. ಇದರಿಂದ ಸಾವಿರಾರು ರೂಪಾಯಿ ವೆಚ್ಚವಾಗಲಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹೊರೆಯಾಗಲಿದೆ. ವಿಶ್ವವಿದ್ಯಾಲಯದ ಈ ನಿರ್ಧಾರವು ಪರೀಕ್ಷಾ ಫಲಿತಾಂಶಗಳ ಮೇಲೆ ಮತ್ತು ವಿವಿಯ ಖ್ಯಾತಿಯ ಮೇಲೆ ಪರಿಣಾಮ ಬೀರಲಿದೆ” ಎಂದು ಪ್ರಾಥಮಿಕ ಶಿಕ್ಷಕರೊಬ್ಬರು ಹೇಳಿದ್ದಾಗಿ ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ ಮಾಡಿ ಆದೇಶ; ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!