AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ

ವಿವಿಧ ವೃತ್ತಿಪರ ಕೋರ್ಸ್ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ
ಕೆಎಸ್​ಆರ್​ಟಿಸಿ ಬಸ್​
ರಮೇಶ್ ಬಿ. ಜವಳಗೇರಾ
| Edited By: |

Updated on:May 04, 2023 | 12:12 PM

Share

ಮುಖ್ಯಾಂಶಗಳು

  • ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ
  • ಕೆಲ ಕೋರ್ಸ್​ಗಳ ಪರೀಕ್ಷೆ ಬಾಕಿ ಇರುವುದರಿಂದ ಪಾಸ್ ಅವಧಿ ವಿಸ್ತರಣೆ
  • ಈ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ ಕೆಎಸ್ಆರ್​​ಟಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ವಿದ್ಯಾರ್ಥಿಗಳ ಬಸ್ ಪಾಸ್ (Students Bus Pass) ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಮತ್ತು ವಿವಿಧ ಕೋರ್ಸ್​ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್​ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್​ಆರ್​ಟಿಸಿ ಮುಖ್ಯ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದ್ರೆ, ಕೆಲ ಕೋರ್ಸ್​ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿವೆ. ಅದಂತೆ ವಿವಿಧ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸುವುದಾಗಿ ಕೆಎಸ್ಆರ್​​ಟಿಸಿ ತಿಳಿಸಿದೆ. ಇನ್ನು ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ನಿಗಮವು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದು ವಿದ್ಯಾರ್ಥಿಗಳಿಗೆ ಅನಕೂಲವಾದಂತಾಗಿದೆ.

Published On - 11:10 am, Thu, 4 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ