AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ

ವಿವಿಧ ವೃತ್ತಿಪರ ಕೋರ್ಸ್ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

KSRTC Students Bus Pass: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ
ಕೆಎಸ್​ಆರ್​ಟಿಸಿ ಬಸ್​
ರಮೇಶ್ ಬಿ. ಜವಳಗೇರಾ
| Edited By: |

Updated on:May 04, 2023 | 12:12 PM

Share

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ವಿದ್ಯಾರ್ಥಿಗಳ ಬಸ್ ಪಾಸ್ (Students Bus Pass) ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಮತ್ತು ವಿವಿಧ ಕೋರ್ಸ್​ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿಯನ್ನು ಕೆಎಸ್​ಆರ್​ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್​ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್​ಆರ್​ಟಿಸಿ ಮುಖ್ಯ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದ್ರೆ, ಕೆಲ ಕೋರ್ಸ್​ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿವೆ. ಅದಂತೆ ವಿವಿಧ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸುವುದಾಗಿ ಕೆಎಸ್ಆರ್​​ಟಿಸಿ ತಿಳಿಸಿದೆ. ಇನ್ನು ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ನಿಗಮವು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದು ವಿದ್ಯಾರ್ಥಿಗಳಿಗೆ ಅನಕೂಲವಾದಂತಾಗಿದೆ.

Published On - 11:10 am, Thu, 4 May 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ