AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕೆ ಕುಸಿತ: ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ

ಶಾಲಾ ಶಿಕ್ಷಣ ಇಲಾಖೆಯಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ 2022-23ನೇ ಸಾಲಿನ ರಾಜ್ಯ ಕಲಿಕಾ ಸಧಾನಾ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ಪ್ರಾಥಮಿಕ ಶಾಲೆಗಳಿಂಗತ ಪ್ರೌಢಶಾಲಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಸಿದೆ.

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕೆ ಕುಸಿತ: ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jul 31, 2023 | 9:19 AM

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಡಿ (Education Department) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ 2022-23ನೇ ಸಾಲಿನ ರಾಜ್ಯ ಕಲಿಕಾ ಸಾಧನಾ ಸಮೀಕ್ಷೆ ವರದಿ ಬಹಿರಂಗವಾಗಿದ್ದು, ಪ್ರಾಥಮಿಕ ಶಾಲೆಗಳಿಗಿಂತ (Primary School) ಪ್ರೌಢಶಾಲಾ ವಿದ್ಯಾರ್ಥಿಗಳು (Students) ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಸಿದೆ. ಕೊರೊನಾ ನಂತರವೂ ಸರ್ಕಾರಿ ಶಾಲೆ ಮಕ್ಕಳ ಕಲಿಕಾ ಮಟ್ಟ ಸುಧಾರಣೆಯಾಗಿಲ್ಲ ಎಂಬುವುದು ಕಳವಳಕಾರಿ ಅಂಶವಾಗಿದೆ.

ರಾಜ್ಯದ 2,618 ಸರ್ಕಾರಿ ಪ್ರಾಥಮಿಕ ಮತ್ತು 694 ಪ್ರೌಢಶಾಲೆಗಳ 3,5,8,9 ಮತ್ತು 10ನೇ ತರಗತಿಯ ಒಟ್ಟು 2,11,843 ವಿದ್ಯಾರ್ಥಿಗಳು ಈ ಸಮೀಕ್ಷೆಯಲ್ಲಿ ಒಳಪಟ್ಟಿದ್ದಾರೆ. ಕಳೆದ ಜನವರಿಯಲ್ಲಿ ಸಮೀಕ್ಷೆ ನಡೆಸಿ ಕಲಿಕೆಯ ತುಲನಾತ್ಮಕ ವಿಶ್ಲೇಷಣೆ ನಡೆಸಲಾಗಿದೆ. 018-19ರಲ್ಲಿ ಕೊನೆಯದಾಗಿ ಕಲಿಕಾ ಸಾಧನೆಯ ಸಮೀಕ್ಷೆಯನ್ನು ನಡೆಸಲಾಗಿದ್ದು, 6ನೇ ತರಗತಿಯಲ್ಲಿದ್ದ ವಿದ್ಯಾರ್ಥಿ ಈಗ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. 2018-19ನೇ ಸಾಲಿನ ರಾಜ್ಯ ಕಲಿಕಾ ಸಾಧನೆಯ ಸಮೀಕ್ಷೆಗೆ ಹೋಲಿಸಿದರೆ, 2022-23ರಲ್ಲಿ ಈ ವಿದ್ಯಾರ್ಥಿಗಳ ಸಾಧನೆಯಿಂದ ಕಲಿಕೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ.

ಇದನ್ನೂ ಓದಿ: ಶಿಕ್ಷಣ ಇಲಾಖೆ ಎರಡನೇ ಬಾರಿಗೆ ನಡೆಸುತ್ತಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

8 ನೇ ತರಗತಿಯ ವಿದ್ಯಾರ್ಥಿಗಳು ಕೇವಲ ಶೇ 51 ರಷ್ಟು, 9 ನೇ ತರಗತಿ ವಿದ್ಯಾರ್ಥಿ ಶೇ 50 ರಷ್ಟು ಮತ್ತು 10 ನೇ ತರಗತಿ ವಿದ್ಯಾರ್ಥಿ ಕಲಿಕಾ ಸಾಧನೆ ಶೇ 55 ರಷ್ಟು ಆಗಿದೆ. ಇನ್ನು ಪ್ರಾಥಮಿಕ ಹಂತದಲ್ಲಿ ‘ನಲಿ-ಕಲಿ’ ನಂತಹ ಚಟುವಟಿಕೆ ಆಧಾರಿತ ಪಾಠಗಳಿಂದ 3 ನೇ ತರಗತಿಯ ವಿದ್ಯಾರ್ಥಿಗಳು ಶೇ 83 ರಷ್ಟು ಕಲಿಕಾ ಸಾಧನೆ, 5 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಧನೆ ಶೇ 71 ರಷ್ಟು ಆಗಿದೆ.

ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಪ್ರಮುಖ ಕುಸಿತ ದಾಖಲಾಗಿದ್ದು, 2018-19ರಲ್ಲಿ 5 ನೇ ತರಗತಿಯ ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಶೇ 79 ರಷ್ಟು ಸಾಧನೆಯಾಗಿದೆ. ಇದು 9 ನೇ ತರಗತಿಯನ್ನು ತಲುಪಿದಾಗ ಶೇ 37 ಕ್ಕೆ ಇಳಿದಿದೆ. ಗಣಿತಶಾಸ್ತ್ರದಲ್ಲಿ ಅದೇ ಗುಂಪಿನ ವಿದ್ಯಾರ್ಥಿಗಳು 73 ಅಂಕಗಳನ್ನು ಗಳಿಸಿದ್ದಾರೆ. 2018 ರಲ್ಲಿ ಶೇ 70 ರಷ್ಟು ಕಲಿಕೆಯ ಸಾಧನೆಯನ್ನು ದಾಖಲಿಸಿದ 6 ನೇ ತರಗತಿ ವಿದ್ಯಾರ್ಥಿಗಳು 2022 ರಲ್ಲಿ ಶೇ 57 ಕ್ಕೆ ಇಳಿದಿದ್ದಾರೆ.

ಸಮೀಕ್ಷೆಯ ಉದ್ದೇಶವು ವಿವಿಧ ವಿಷಯಗಳಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕೆಯ ಸ್ಥಿತಿಯನ್ನು ಅಧ್ಯಯನ ಮಾಡುವುದು ಮತ್ತು ಶಾಲೆಯ ಮೂಲ ಸೌಕರ್ಯಗಳು, ಶಿಕ್ಷಕರ ಅರ್ಹತೆ, ಮಧ್ಯಾಹ್ನದ ಊಟದ ಯೋಜನೆ, ಬೋಧನಾ-ಕಲಿಕಾ ವಾತಾವರಣ, ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಪರಿಣಾಮ ಮತ್ತು ಅವರ ಕಲಿಕೆಯ ಸಾಮರ್ಥ್ಯಗಳ ಮೇಲೆ ಕೊರೊನಾ ಪ್ರಭಾವ ಬೀರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Mon, 31 July 23

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ