AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LKG, UKG ಆರಂಭಕ್ಕೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್; ನವೆಂಬರ್ 8ರಿಂದ ಭೌತಿಕ ತರಗತಿ ಶುರು

ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ಮಾಡಲಾಗಿದೆ. LKG, UKG ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್ ಕೊಟ್ಟಿದೆ.

LKG, UKG ಆರಂಭಕ್ಕೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್; ನವೆಂಬರ್ 8ರಿಂದ ಭೌತಿಕ ತರಗತಿ ಶುರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 04, 2021 | 5:00 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್‌ಸಿಗ್ನಲ್ ನೀಡಲಾಗಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ಮಾಡಲಾಗಿದೆ. LKG, UKG ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್ ಕೊಟ್ಟಿದೆ. LKG, UKG ಭೌತಿಕ ತರಗತಿ ಆರಂಭಕ್ಕೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ರಿಲೀಸ್‌ ಆಗಿದೆ.

LKG ಹಾಗೂ UKG ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಆಗಿರಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ LKG, UKG ಭೌತಿಕ ತರಗತಿಗಳು ಶುರು ಆಗಲಿವೆ. ಬೆಳಗ್ಗೆ 9.39 ರಿಂದ ಮಧ್ಯಾಹ್ನ 3.39 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ. ಕೊವಿಡ್ ಲಕ್ಷಣ ಇರೊ ಮಕ್ಕಳಿಗೆ Lkg ಹಾಗೂ Ukg ಪ್ರವೇಶ ಇಲ್ಲ ಎಂದೂ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭವಾಗಿತ್ತು. ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿರಲಿದೆ. ಶಿಕ್ಷಕರು, ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ವಾಗಿದೆ. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಹಾಗೇ, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​​ಶೀಲ್ಡ್​​​ ಕಡ್ಡಾಯವಾಗಿದೆ ಎಂದು ನಿಯಮ ವಿಧಿಸಲಾಗಿತ್ತು.

ಅ. 30ರವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ. 2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಲಿದೆ. ಕೊಠಡಿಯಲ್ಲಿ 15ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬಹುದು. ಶಾಲೆಯ ಗೇಟ್ ​​ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Karnataka School Reopen: 1ರಿಂದ 5ನೇ ತರಗತಿ ಆರಂಭ: ಖುಷಿಖುಷಿಯಾಗಿ ಶಾಲೆಗೆ ಹೊರಟರು ಮಕ್ಕಳು

ಇದನ್ನೂ ಓದಿ: ಸರ್ಕಾರಿ ಶಾಲೆಗೆ ಆಕರ್ಷಕ ರೈಲು ಬಂಡಿ ಪೇಂಟಿಂಗ್; ಮಕ್ಕಳನ್ನು ಶಾಲೆಗೆ ಕರೆತರಲು ವಿನೂತನ ಪ್ರಯತ್ನ

Published On - 4:43 pm, Thu, 4 November 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!