AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ
Mangaluru University
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:Mar 17, 2023 | 1:12 PM

Share

ಕೊಣಾಜೆ: ಗುರುವಾರ (ಮಾರ್ಚ್ 16) ನಡೆದ ಮಂಗಳೂರು ವಿಶ್ವವಿದ್ಯಾನಿಲಯದ (Mangaluru University) ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (Academic Year) ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ (BCom in Business Data Analytics) ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನ ಕೇಂದ್ರದ ಸಂಸ್ಥೆಗೆ ಸಂಬಂಧಿಸಿದ ಕರಡು ಕಾಯಿದೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸರ್ಕಾರವು ಪ್ರಸ್ತಾವನೆಯನ್ನು ಅನುಮೋದಿಸಿ 2022-23ರ ಬಜೆಟ್‌ನಲ್ಲಿ ವಿತ್ತೀಯ ಮಂಜೂರಾತಿಯನ್ನು ನೀಡಿದೆ ಮತ್ತು ಅರೆಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಅರೆಭಾಷೆ ಸಂಶೋಧನ ಕೇಂದ್ರ ಸ್ಥಾಪನೆಗೆ ಅನುದಾನವನ್ನು ಬಿಡುಗಡೆ ಮಾಡಿದೆ.

ಅರೆಭಾಷೆ ಅಥವಾ ಅರೆಗನ್ನಡವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡಂತೆ ಗೌಡರು ಮತ್ತು ಇತರ ಕೆಲವು ಸಮುದಾಯಗಳಿಂದ ಮುಖ್ಯವಾಗಿ ಮಾತನಾಡುವ ಪ್ರಾದೇಶಿಕ ಭಾಷೆಯಾಗಿದೆ. 1,000 ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆ ಅಳಿವಿನ ಭೀತಿ ಎದುರಿಸುತ್ತಿದ್ದು, ಅರೆಭಾಷೆಯ ಸಾಹಿತ್ಯ, ಶ್ರೀಮಂತ ಸಂಸ್ಕೃತಿ, ಆಚರಣೆಗಳನ್ನು ಸಂರಕ್ಷಿಸಲು ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವ ಅಗತ್ಯವಿತ್ತು. ಸದ್ಯ ಯಡಪಡಿತ್ತಾಯ ಅವರು ರಾಜ್ಯ ಸರ್ಕಾರದ ಔಪಚಾರಿಕ ಅನುಮೋದನೆಗೆ ಕಾಯುತ್ತಿದ್ದಾರೆ ಮತ್ತು ಅನುಮೋದನೆ ಬಿಡುಗಡೆಯಾದ ನಂತರ ಸಂಶೋಧನಾ ಕೇಂದ್ರವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಹೊರಬೀಳಲಿದೆ ಐಐಟಿ ಜೆಎಎಂ 2023 ಫಲಿತಾಂಶ; ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳೂರಿನ ಕೊಣಾಜೆಯಲ್ಲಿದೆ. “ಜ್ಞಾನವೇ ಬೆಳಕು” ಎಂಬ ಧ್ಯೇಯ ವಾಕ್ಯ ಹೊಂದಿರುಲಾವ್ ಈ ವಿಶ್ವವಿದ್ಯಾನಿಲಯ ಸುಮಾರು 360 ಎಕರೆ ಪ್ರದೇಶವನ್ನು ಹೊಂದಿದೆ. ದಕ್ಷಿಣ ಕನ್ನಡ, ಕೊಡಗು ಹಾಗು ಉಡುಪಿ ಜಿಲ್ಲೆಯ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಈ ವಿಶ್ವವಿದ್ಯಾಲಯದ ಅಧಿಕಾರ ವ್ಯಾಪ್ತಿಗೆ ಒಳಪಡುತ್ತವೆ. ಮೊದಲು ಇದು ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವಾಗಿತ್ತು .1980 ರಲ್ಲಿ ಸ್ವತಂತ್ರ ವಿಶ್ವವಿದ್ಯಾಲಯವಾಯಿತು.

Published On - 1:07 pm, Fri, 17 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ