Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ
Mangaluru University
Follow us
|

Updated on:Mar 17, 2023 | 1:12 PM

ಕೊಣಾಜೆ: ಗುರುವಾರ (ಮಾರ್ಚ್ 16) ನಡೆದ ಮಂಗಳೂರು ವಿಶ್ವವಿದ್ಯಾನಿಲಯದ (Mangaluru University) ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (Academic Year) ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ (BCom in Business Data Analytics) ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನ ಕೇಂದ್ರದ ಸಂಸ್ಥೆಗೆ ಸಂಬಂಧಿಸಿದ ಕರಡು ಕಾಯಿದೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸರ್ಕಾರವು ಪ್ರಸ್ತಾವನೆಯನ್ನು ಅನುಮೋದಿಸಿ 2022-23ರ ಬಜೆಟ್‌ನಲ್ಲಿ ವಿತ್ತೀಯ ಮಂಜೂರಾತಿಯನ್ನು ನೀಡಿದೆ ಮತ್ತು ಅರೆಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಅರೆಭಾಷೆ ಸಂಶೋಧನ ಕೇಂದ್ರ ಸ್ಥಾಪನೆಗೆ ಅನುದಾನವನ್ನು ಬಿಡುಗಡೆ ಮಾಡಿದೆ.

ಅರೆಭಾಷೆ ಅಥವಾ ಅರೆಗನ್ನಡವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡಂತೆ ಗೌಡರು ಮತ್ತು ಇತರ ಕೆಲವು ಸಮುದಾಯಗಳಿಂದ ಮುಖ್ಯವಾಗಿ ಮಾತನಾಡುವ ಪ್ರಾದೇಶಿಕ ಭಾಷೆಯಾಗಿದೆ. 1,000 ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆ ಅಳಿವಿನ ಭೀತಿ ಎದುರಿಸುತ್ತಿದ್ದು, ಅರೆಭಾಷೆಯ ಸಾಹಿತ್ಯ, ಶ್ರೀಮಂತ ಸಂಸ್ಕೃತಿ, ಆಚರಣೆಗಳನ್ನು ಸಂರಕ್ಷಿಸಲು ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವ ಅಗತ್ಯವಿತ್ತು. ಸದ್ಯ ಯಡಪಡಿತ್ತಾಯ ಅವರು ರಾಜ್ಯ ಸರ್ಕಾರದ ಔಪಚಾರಿಕ ಅನುಮೋದನೆಗೆ ಕಾಯುತ್ತಿದ್ದಾರೆ ಮತ್ತು ಅನುಮೋದನೆ ಬಿಡುಗಡೆಯಾದ ನಂತರ ಸಂಶೋಧನಾ ಕೇಂದ್ರವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಹೊರಬೀಳಲಿದೆ ಐಐಟಿ ಜೆಎಎಂ 2023 ಫಲಿತಾಂಶ; ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳೂರಿನ ಕೊಣಾಜೆಯಲ್ಲಿದೆ. “ಜ್ಞಾನವೇ ಬೆಳಕು” ಎಂಬ ಧ್ಯೇಯ ವಾಕ್ಯ ಹೊಂದಿರುಲಾವ್ ಈ ವಿಶ್ವವಿದ್ಯಾನಿಲಯ ಸುಮಾರು 360 ಎಕರೆ ಪ್ರದೇಶವನ್ನು ಹೊಂದಿದೆ. ದಕ್ಷಿಣ ಕನ್ನಡ, ಕೊಡಗು ಹಾಗು ಉಡುಪಿ ಜಿಲ್ಲೆಯ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಈ ವಿಶ್ವವಿದ್ಯಾಲಯದ ಅಧಿಕಾರ ವ್ಯಾಪ್ತಿಗೆ ಒಳಪಡುತ್ತವೆ. ಮೊದಲು ಇದು ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವಾಗಿತ್ತು .1980 ರಲ್ಲಿ ಸ್ವತಂತ್ರ ವಿಶ್ವವಿದ್ಯಾಲಯವಾಯಿತು.

Published On - 1:07 pm, Fri, 17 March 23

ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್