AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಶಿಕ್ಷಣ ಇಲಾಖೆ ಜಾರಿಗೆ ಮಾಡಲು ನಿರ್ಧರಿಸುತ್ತಿರುವ ಒಂದೊಂದು ವಿಷಯಗಳು ಕೂಡ ವಿವಾದ ಪಡೆದುಕೊಳ್ಳುತ್ತಿವೆ. ಮಕ್ಕಳಿಗೆ ಧ್ಯಾನ ಕಲಿಕೆಗೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಶತಾಯ ಗತಾಯ ಮಕ್ಕಳಿಗೆ ಧ್ಯಾನ ಕಲಿಸಲು‌ ಶಿಕ್ಷಣ ಇಲಾಖೆ ಸಜ್ಜಾಗುತ್ತಿದೆ.

ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ
ಟೀಕೆಗಳ ನಡುವೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ
TV9 Web
| Edited By: |

Updated on:Nov 18, 2022 | 7:48 AM

Share

ಬೆಂಗಳೂರು: ಶಿಕ್ಷಣ ಇಲಾಖೆಯು (Karnataka Education Department) ಒಂದಲ್ಲಾ ಒಂದು ರೀತಿಯಲ್ಲಿ ವಿವಾದಕ್ಕೆ ಸಿಲುಕಿಕೊಳ್ಳುತ್ತಿದ್ದು, ಹಿಜಾಬ್ (Hijab), ಭಗವದ್ಗೀತೆ (Bhagavadgita), ನಂತರ ಇದೀಗ ಧ್ಯಾನ (Meditation)ದ ವಿಚಾರವಾಗಿ ವಿವಾದ (Controversy) ಎದ್ದಿದೆ. ವಿರೋಧ ಪಕ್ಷಗಳು ಹಾಗೂ ಕೆಲವೊಂದು ಮುಸ್ಲಿಂ ಮುಖಂಡರ ಟೀಕೆಗಳ ನಡುವೆಯೂ ಶಿಕ್ಷಣ ಇಲಾಖೆ ತಾನು ಜಾರಿಗೊಳಿಸಲು ಯೋಚಿಸುತ್ತಿರುವ ಧ್ಯಾನ ಪಾಠಕ್ಕೆ ಶತಾಯ ಗತಾಯ ಸಜ್ಜಾಗುತ್ತಿದೆ. ಯಾವುದೇ ಟೀಕೆಗಳಿಗೂ ಜಗ್ಗದೆ ಶಾಲಾ ಮಕ್ಕಳಿಗೆ ಧ್ಯಾನ ಕಲಿಸಿಕೊಡಲು‌ ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದ್ದು, ಮುಂದಿನ ತಿಂಗಳಿನಿಂದಲೇ ಧ್ಯಾನ ಪಾಠ ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ತಾನು ಚಿಂತನೆ ನಡೆಸಿದಂತೆ ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಕಲಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಪತಂಜಲಿ ಮತ್ತು ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗೂರೂಜಿ ಮೊರೆ ಹೋಗಲು ಯೋಜಿಸಿದೆ. ರವಿಶಂಕರ್ ಗೂರೂಜಿ ಸೇರಿದಂತೆ ಪತಂಜಲಿ ಯೋಗ ಪರಿಣತರ ಸಲಹೆ ಪಡೆಯಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಯಾವ ರೀತಿಯ ಧ್ಯಾನ ಹೇಳಿಕೊಡಬೇಕು? ಎಷ್ಟು ಹೊತ್ತು ಧ್ಯಾನ‌ ಮಾಡಿಸಬೇಕು ಎಂಬುದರ ಬಗ್ಗೆ ಸಲಹೆ ಪಡೆಯಲು ನಿರ್ಧಾರ ಮಾಡಿಕೊಂಡಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳು ಮುಂದಿನ ವಾರದಿಂದ ನಡೆಸಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ

ಏನಿದು ಧ್ಯಾನ ವಿವಾದ?

ಕರ್ನಾಟಕದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಡ್ಡಾಯವಾಗಿ ಧ್ಯಾನದ ಅಭ್ಯಾಸ ಮಾಡಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸೂಚಿಸಿದ್ದರು. ಮಕ್ಕಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನ (Meditation) ಮಾಡಿಸುವುದು ಅಗತ್ಯವಾಗಿರುತ್ತದೆ ಎಂದು ಸಚಿವ ಸುತ್ತೋಲೆಯಲ್ಲಿ ತಿಳಿಸಿದ್ದರು. ರಾಜ್ಯದ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಈಗಾಗಲೇ ಧ್ಯಾನವನ್ನು ಮಾಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿರುತ್ತಾರೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Fri, 18 November 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?