Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmendra Pradhan: ಡಿಜಿಟಲ್ ಕೌಶಲ್ಯಗಳನ್ನು ಸುಧಾರಿಸಲು ‘ಮೆಟಾ’ ಜೊತೆ ಶಿಕ್ಷಣ ಸಚಿವಾಲಯ ಪಾಲುದಾರಿಕೆ

Education Ministry Meta Partnership: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಹಭಾಗಿತ್ವದಲ್ಲಿ, CBSE ಶಾಲೆಗಳನ್ನು ಮೆಟಾ, AI ಮತ್ತು VR ಸಾಮರ್ಥ್ಯಗಳೊಂದಿಗೆ ಸಂಪರ್ಕಿಸಲಾಗುವುದು, ಇದು ತಂತ್ರಜ್ಞಾನ ಸಾಕ್ಷರತೆಯನ್ನು ಹೆಚ್ಚಿಸುತ್ತದೆ. ಸಾಮರ್ಥ್ಯ ವೃದ್ಧಿಗಾಗಿ ಎಐಸಿಟಿಇ ಜೊತೆ META ಕೆಲಸ ಮಾಡಲಿದೆ ಎಂದು ಸಚಿವರು ಹೇಳಿದರು. NIESBUD ಸಹಭಾಗಿತ್ವದಲ್ಲಿ, ಮೆಟಾ ಮೂಲಕ ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಉದ್ಯಮಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳು ಲಭ್ಯವಾಗಲಿವೆ.

Dharmendra Pradhan: ಡಿಜಿಟಲ್ ಕೌಶಲ್ಯಗಳನ್ನು ಸುಧಾರಿಸಲು 'ಮೆಟಾ' ಜೊತೆ ಶಿಕ್ಷಣ ಸಚಿವಾಲಯ ಪಾಲುದಾರಿಕೆ
ಶಿಕ್ಷಣ ಸಚಿವಾಲಯದೊಂದಿಗೆ ಮೆಟಾ ಪಾಲುದಾರಿಕೆ
Follow us
ನಯನಾ ಎಸ್​ಪಿ
|

Updated on:Sep 05, 2023 | 3:58 PM

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಒದಗಿಸಲು ಅನೇಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಡಿಜಿಟಲೀಕರಣದ (Digitalization) ಭಾಗವಾಗಿ, ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (AICTE), ರಾಷ್ಟ್ರೀಯ ಉದ್ಯಮಶೀಲತೆ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ಸಂಸ್ಥೆ (NIESBUD) ವಿದ್ಯಾರ್ಥಿಗಳಿಗೆ ಡಿಜಿಟಲ್, ಕೌಶಲ್ಯ ಶಿಕ್ಷಣವನ್ನು ಒದಗಿಸಲು ಮೆಟಾದೊಂದಿಗೆ ಪಾಲುದಾರಿಕೆ ಹೊಂದಲಿದೆ.

ಮೆಟಾ ಕಂಪನಿ ಮತ್ತು ಭಾರತ ಸರ್ಕಾರಕ್ಕೆ ಸೇರಿದ ಪ್ರಮುಖ ಶಿಕ್ಷಣ ಸಂಸ್ಥೆಗಳ ನಡುವೆ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು. Meta, NIESBUD, AICTE, CBSE ನಡುವೆ ಮೂರು ಲೆಟರ್ ಆಫ್ ಇಂಟೆಂಟ್ (LoI) ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಾಲುದಾರಿಕೆಗಳ ವಿವರಗಳನ್ನು ತಿಳಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮದಲ್ಲಿ ಮಾತನಾಡಿ, ಮೆಟಾ, ಎಐ, ವಿಆರ್ ಸಾಮರ್ಥ್ಯದೊಂದಿಗೆ ಸಿಬಿಎಸ್‌ಇ ಶಾಲೆಗಳ ಸಂಪರ್ಕ ಹೆಚ್ಚಲಿದ್ದು, ಇದರಿಂದ ತಂತ್ರಜ್ಞಾನ ಸಾಕ್ಷರತೆಯೂ ಹೆಚ್ಚಲಿದೆ. ಸಾಮರ್ಥ್ಯ ವೃದ್ಧಿಗಾಗಿ ಎಐಸಿಟಿಇ ಜೊತೆ META ಕೆಲಸ ಮಾಡಲಿದೆ ಎಂದು ಸಚಿವರು ಹೇಳಿದರು. NIESBUD ಸಹಭಾಗಿತ್ವದಲ್ಲಿ, ಮೆಟಾ ಮೂಲಕ ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಉದ್ಯಮಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳು ಲಭ್ಯವಾಗಲಿವೆ. ಉದಯೋನ್ಮುಖ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ 7 ಪ್ರಾದೇಶಿಕ ಭಾಷೆಗಳಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿಕೊಂಡು ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನವದೆಹಲಿಯಲ್ಲಿ ಮೆಟಾ ಸಹಯೋಗದಲ್ಲಿ ‘ಉದ್ಯಮಶೀಲತೆಗೆ ಶಿಕ್ಷಣ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಉದ್ಯಮಿಗಳ ಸಬಲೀಕರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಕೇಂದ್ರ ಶಿಕ್ಷಣ ಸಚಿವರ ಸಮ್ಮುಖದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದನ್ನೂ ಓದಿ: 2024ರ ಅಂತ್ಯದ ವೇಳೆಗೆ ಒಂದು ದಶಲಕ್ಷ ಜನರಿಗೆ ಉಚಿತ ಡಿಜಿಟಲ್ ಕೋರ್ಸ್ ನೀಡಲು ಫ್ಯೂಚರ್‌ಸ್ಕಿಲ್ಸ್ ಪ್ರೈಮ್‌ ಜೊತೆ ಸರ್ವಿಸ್‌ನೌ ಪಾಲುದಾರಿಕೆ

ಈ ಕಾರ್ಯಕ್ರಮಗಳ ಪ್ರಾಥಮಿಕ ಉದ್ದೇಶವು ಯುವಜನರನ್ನು ಅಭಿವೃದ್ಧಿಶೀಲ ಉದ್ಯಮಗಳಾಗಿ ಪರಿವರ್ತಿಸಲು ಪ್ರೇರೇಪಿಸುವ ಪ್ರಯಾಣವನ್ನು ಉತ್ತೇಜಿಸುವುದಾಗಿದೆ ಎಂದು ಕೇಂದ್ರ ಸಚಿವ ಪ್ರಧಾನ್ ವಿವರಿಸಿದರು. ಭಾರತವನ್ನು ವಿಶ್ವದ ಕೌಶಲ್ಯ ರಾಜಧಾನಿಯನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Tue, 5 September 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ