AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmendra Pradhan: ಡಿಜಿಟಲ್ ಕೌಶಲ್ಯಗಳನ್ನು ಸುಧಾರಿಸಲು ‘ಮೆಟಾ’ ಜೊತೆ ಶಿಕ್ಷಣ ಸಚಿವಾಲಯ ಪಾಲುದಾರಿಕೆ

Education Ministry Meta Partnership: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಹಭಾಗಿತ್ವದಲ್ಲಿ, CBSE ಶಾಲೆಗಳನ್ನು ಮೆಟಾ, AI ಮತ್ತು VR ಸಾಮರ್ಥ್ಯಗಳೊಂದಿಗೆ ಸಂಪರ್ಕಿಸಲಾಗುವುದು, ಇದು ತಂತ್ರಜ್ಞಾನ ಸಾಕ್ಷರತೆಯನ್ನು ಹೆಚ್ಚಿಸುತ್ತದೆ. ಸಾಮರ್ಥ್ಯ ವೃದ್ಧಿಗಾಗಿ ಎಐಸಿಟಿಇ ಜೊತೆ META ಕೆಲಸ ಮಾಡಲಿದೆ ಎಂದು ಸಚಿವರು ಹೇಳಿದರು. NIESBUD ಸಹಭಾಗಿತ್ವದಲ್ಲಿ, ಮೆಟಾ ಮೂಲಕ ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಉದ್ಯಮಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳು ಲಭ್ಯವಾಗಲಿವೆ.

Dharmendra Pradhan: ಡಿಜಿಟಲ್ ಕೌಶಲ್ಯಗಳನ್ನು ಸುಧಾರಿಸಲು 'ಮೆಟಾ' ಜೊತೆ ಶಿಕ್ಷಣ ಸಚಿವಾಲಯ ಪಾಲುದಾರಿಕೆ
ಶಿಕ್ಷಣ ಸಚಿವಾಲಯದೊಂದಿಗೆ ಮೆಟಾ ಪಾಲುದಾರಿಕೆ
ನಯನಾ ಎಸ್​ಪಿ
|

Updated on:Sep 05, 2023 | 3:58 PM

Share

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಒದಗಿಸಲು ಅನೇಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಡಿಜಿಟಲೀಕರಣದ (Digitalization) ಭಾಗವಾಗಿ, ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (AICTE), ರಾಷ್ಟ್ರೀಯ ಉದ್ಯಮಶೀಲತೆ ಮತ್ತು ಸಣ್ಣ ವ್ಯಾಪಾರ ಅಭಿವೃದ್ಧಿ ಸಂಸ್ಥೆ (NIESBUD) ವಿದ್ಯಾರ್ಥಿಗಳಿಗೆ ಡಿಜಿಟಲ್, ಕೌಶಲ್ಯ ಶಿಕ್ಷಣವನ್ನು ಒದಗಿಸಲು ಮೆಟಾದೊಂದಿಗೆ ಪಾಲುದಾರಿಕೆ ಹೊಂದಲಿದೆ.

ಮೆಟಾ ಕಂಪನಿ ಮತ್ತು ಭಾರತ ಸರ್ಕಾರಕ್ಕೆ ಸೇರಿದ ಪ್ರಮುಖ ಶಿಕ್ಷಣ ಸಂಸ್ಥೆಗಳ ನಡುವೆ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು. Meta, NIESBUD, AICTE, CBSE ನಡುವೆ ಮೂರು ಲೆಟರ್ ಆಫ್ ಇಂಟೆಂಟ್ (LoI) ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಾಲುದಾರಿಕೆಗಳ ವಿವರಗಳನ್ನು ತಿಳಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮದಲ್ಲಿ ಮಾತನಾಡಿ, ಮೆಟಾ, ಎಐ, ವಿಆರ್ ಸಾಮರ್ಥ್ಯದೊಂದಿಗೆ ಸಿಬಿಎಸ್‌ಇ ಶಾಲೆಗಳ ಸಂಪರ್ಕ ಹೆಚ್ಚಲಿದ್ದು, ಇದರಿಂದ ತಂತ್ರಜ್ಞಾನ ಸಾಕ್ಷರತೆಯೂ ಹೆಚ್ಚಲಿದೆ. ಸಾಮರ್ಥ್ಯ ವೃದ್ಧಿಗಾಗಿ ಎಐಸಿಟಿಇ ಜೊತೆ META ಕೆಲಸ ಮಾಡಲಿದೆ ಎಂದು ಸಚಿವರು ಹೇಳಿದರು. NIESBUD ಸಹಭಾಗಿತ್ವದಲ್ಲಿ, ಮೆಟಾ ಮೂಲಕ ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಉದ್ಯಮಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳು ಲಭ್ಯವಾಗಲಿವೆ. ಉದಯೋನ್ಮುಖ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ 7 ಪ್ರಾದೇಶಿಕ ಭಾಷೆಗಳಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿಕೊಂಡು ಡಿಜಿಟಲ್ ಮಾರ್ಕೆಟಿಂಗ್ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನವದೆಹಲಿಯಲ್ಲಿ ಮೆಟಾ ಸಹಯೋಗದಲ್ಲಿ ‘ಉದ್ಯಮಶೀಲತೆಗೆ ಶಿಕ್ಷಣ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಉದ್ಯಮಿಗಳ ಸಬಲೀಕರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಕೇಂದ್ರ ಶಿಕ್ಷಣ ಸಚಿವರ ಸಮ್ಮುಖದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದನ್ನೂ ಓದಿ: 2024ರ ಅಂತ್ಯದ ವೇಳೆಗೆ ಒಂದು ದಶಲಕ್ಷ ಜನರಿಗೆ ಉಚಿತ ಡಿಜಿಟಲ್ ಕೋರ್ಸ್ ನೀಡಲು ಫ್ಯೂಚರ್‌ಸ್ಕಿಲ್ಸ್ ಪ್ರೈಮ್‌ ಜೊತೆ ಸರ್ವಿಸ್‌ನೌ ಪಾಲುದಾರಿಕೆ

ಈ ಕಾರ್ಯಕ್ರಮಗಳ ಪ್ರಾಥಮಿಕ ಉದ್ದೇಶವು ಯುವಜನರನ್ನು ಅಭಿವೃದ್ಧಿಶೀಲ ಉದ್ಯಮಗಳಾಗಿ ಪರಿವರ್ತಿಸಲು ಪ್ರೇರೇಪಿಸುವ ಪ್ರಯಾಣವನ್ನು ಉತ್ತೇಜಿಸುವುದಾಗಿದೆ ಎಂದು ಕೇಂದ್ರ ಸಚಿವ ಪ್ರಧಾನ್ ವಿವರಿಸಿದರು. ಭಾರತವನ್ನು ವಿಶ್ವದ ಕೌಶಲ್ಯ ರಾಜಧಾನಿಯನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Tue, 5 September 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?