AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ

ಡಾ. ಸಿ.ಎನ್‌ ಅಶ್ವತ್ಥ್‌ ನಾರಾಯಣ್ ಫೌಂಡೇಷನ್‌ ವತಿಯಿಂದ, Scholar's Wing ಸಹಯೋಗದಲ್ಲಿ Dr CNA Learning APP ಲೋಕಾರ್ಪಣೆ ಮಾಡಲಾಯಿತು. CET, NEET, IIT-JEE ಮತ್ತಿತರ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಲು ನೆರವಾಗಲಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ
TV9 Web
| Edited By: |

Updated on: Mar 03, 2023 | 10:14 AM

Share

ಡಾ.ಸಿಎನ್‌ಎ ಲರ್ನಿಂಗ್ ಅಪ್ಲಿಕೇಶನ್‌’ (Dr.CNA Learning App) ಬಿಡುಗಡೆಯಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr CN Ashwath narayan)ಆ್ಯಪ್​ನ್ನು ಬಿಡುಗಡೆಗೊಳಿಸಿದ್ದಾರೆ. ಈ ಆ್ಯಪ್ ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಲ್ಲೇಶ್ವರ ವ್ಯಾಪ್ತಿಯಲ್ಲಿ 17 ಸರ್ಕಾರಿ ಮತ್ತು ಖಾಸಗಿ ಪಿಯುಸಿ ವಿಜ್ಞಾನ ಕಾಲೇಜುಗಳು ಇದ್ದು ಅಲ್ಲಿನ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್‌ ಮೂಲಕ ಕಲಿಯಬಹುದಾಗಿದೆ.

ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅಶ್ವತ್ಥನಾರಾಯಣ, ‘ 24×7 ಲಭ್ಯವಿರುವ 2ಡಿ ಮತ್ತು 3ಡಿ ಅನಿಮೇಟೆಡ್ ವಿಡಿಯೋ ರೂಪದ ಉಪನ್ಯಾಸಗಳಿವೆ. ಇದರ ಜತೆಗೆ 30 ಸಾವಿರಕ್ಕೂ ಹೆಚ್ಚು ಬಹುಆಯ್ಕೆಯ ಪ್ರಶ್ನೋತ್ತರಗಳನ್ನು ಸಿದ್ಧಪಡಿಸಿ ಕೊಡಲಾಗಿದೆ. ಈ ಆ್ಯಪ್ ಬಳಸಿಕೊಂಡು ವಿದ್ಯಾರ್ಥಿಗಳು ಸುಲಭವಾಗಿ ಪಿಯುಸಿ ಪರೀಕ್ಷೆ, ಸಿಇಟಿ, ನೀಟ್‌, ಐಐಟಿ ಪರೀಕ್ಷೆಗಳಿಗೆ ಸಿದ್ಧವಾಗಬಹುದು. ಜತೆಗೆ ಇದರಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಕ್ರಾಶ್ ಕೋರ್ಸುಗಳೂ ಇವೆ. ಮಲ್ಲೇಶ್ವರ ಕ್ಷೇತ್ರದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿ, ಈ ಉಪಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಈ ಆ್ಯಪ್ ಹೇಗೆ ಡೌನ್​ ಮಾಡಿಕೊಳ್ಳಬೇಕೆಂದು ಆಯಾ ಕಾಲೇಜುಗಳಲ್ಲಿನ ಉಪನ್ಯಾಸಕರ ಸಹಾಯದಿಂದ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ