AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ

ಡಾ. ಸಿ.ಎನ್‌ ಅಶ್ವತ್ಥ್‌ ನಾರಾಯಣ್ ಫೌಂಡೇಷನ್‌ ವತಿಯಿಂದ, Scholar's Wing ಸಹಯೋಗದಲ್ಲಿ Dr CNA Learning APP ಲೋಕಾರ್ಪಣೆ ಮಾಡಲಾಯಿತು. CET, NEET, IIT-JEE ಮತ್ತಿತರ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಲು ನೆರವಾಗಲಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ
TV9 Web
| Edited By: |

Updated on: Mar 03, 2023 | 10:14 AM

Share

ಡಾ.ಸಿಎನ್‌ಎ ಲರ್ನಿಂಗ್ ಅಪ್ಲಿಕೇಶನ್‌’ (Dr.CNA Learning App) ಬಿಡುಗಡೆಯಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr CN Ashwath narayan)ಆ್ಯಪ್​ನ್ನು ಬಿಡುಗಡೆಗೊಳಿಸಿದ್ದಾರೆ. ಈ ಆ್ಯಪ್ ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಲ್ಲೇಶ್ವರ ವ್ಯಾಪ್ತಿಯಲ್ಲಿ 17 ಸರ್ಕಾರಿ ಮತ್ತು ಖಾಸಗಿ ಪಿಯುಸಿ ವಿಜ್ಞಾನ ಕಾಲೇಜುಗಳು ಇದ್ದು ಅಲ್ಲಿನ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್‌ ಮೂಲಕ ಕಲಿಯಬಹುದಾಗಿದೆ.

ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅಶ್ವತ್ಥನಾರಾಯಣ, ‘ 24×7 ಲಭ್ಯವಿರುವ 2ಡಿ ಮತ್ತು 3ಡಿ ಅನಿಮೇಟೆಡ್ ವಿಡಿಯೋ ರೂಪದ ಉಪನ್ಯಾಸಗಳಿವೆ. ಇದರ ಜತೆಗೆ 30 ಸಾವಿರಕ್ಕೂ ಹೆಚ್ಚು ಬಹುಆಯ್ಕೆಯ ಪ್ರಶ್ನೋತ್ತರಗಳನ್ನು ಸಿದ್ಧಪಡಿಸಿ ಕೊಡಲಾಗಿದೆ. ಈ ಆ್ಯಪ್ ಬಳಸಿಕೊಂಡು ವಿದ್ಯಾರ್ಥಿಗಳು ಸುಲಭವಾಗಿ ಪಿಯುಸಿ ಪರೀಕ್ಷೆ, ಸಿಇಟಿ, ನೀಟ್‌, ಐಐಟಿ ಪರೀಕ್ಷೆಗಳಿಗೆ ಸಿದ್ಧವಾಗಬಹುದು. ಜತೆಗೆ ಇದರಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಕ್ರಾಶ್ ಕೋರ್ಸುಗಳೂ ಇವೆ. ಮಲ್ಲೇಶ್ವರ ಕ್ಷೇತ್ರದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿ, ಈ ಉಪಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಈ ಆ್ಯಪ್ ಹೇಗೆ ಡೌನ್​ ಮಾಡಿಕೊಳ್ಳಬೇಕೆಂದು ಆಯಾ ಕಾಲೇಜುಗಳಲ್ಲಿನ ಉಪನ್ಯಾಸಕರ ಸಹಾಯದಿಂದ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ