ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ
ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.

ದೆಹಲಿ, ಆಗಸ್ಟ್ 26: ನೀಟ್ ಪ್ರಶ್ನೆಪತ್ರಿಕೆ ಸೊರಿಕೆ ಇಡೀ ದೇಶದಲ್ಲಿ ಹೋರಾಟ ಕ್ರಾಂತಿ ಹುಟ್ಟಿಸಿತ್ತು. ಅಷ್ಟೇ ಅಲ್ಲದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೂ ಕಾರಣವಾಗಿತ್ತು. ಆಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಸೈಲೆಂಟ್ ಆಗಿತ್ತು. ನಂತರ ನೂತನ ಶಿಕ್ಷಣ ಸಚಿವರನ್ನಾಗಿ ಪ್ರಲ್ಹಾದ್ ಜೋಶಿಯನ್ನು (Pralhad Joshi) ಕೇಂದ್ರ ಸರ್ಕಾರ ನೇಮಿಸಿತ್ತು. ಅಂದಿನಿಂದ ಈವರೆಗೆ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪ್ರಲ್ಹಾದ್ ಜೋಶಿ ನಿರಂತರವಾಗಿ ಉನ್ನತ ಮಟ್ಟದ ಸಭೆಗಳನ್ನು ಮಾಡುತ್ತಿದ್ದಾರೆ. ಇಂದು ಕೂಡ ಉನ್ನತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದು, ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಕಸರತ್ತು ನಡೆಸಿದ್ದಾರೆ.
ಪ್ರತಿ ಹಂತದಲ್ಲೂ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಆದ್ಯತೆ
ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಇಂದು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಮಹತ್ವದ ಸಭೆ ಮಾಡಿದ್ದು, ಪ್ರಸ್ತುತ ಜಾರಿಯಲ್ಲಿರುವ ವಿವಿಧ ಶೈಕ್ಷಣಿಕ ಉಪಕ್ರಮಗಳ ವಾಸ್ತವ ಅನುಷ್ಠಾನದ ಕುರಿತು ಸಮಗ್ರ ಅವಲೋಕನ ನಡೆಸಿದ್ದಾರೆ.
ಪ್ರಲ್ಹಾದ್ ಜೋಶಿ ಟ್ವೀಟ್
Held a meeting with senior officials of Department of Higher Education and Department of School Education and Literacy, @EduMinOfIndia, to take stock of the progress on the directions issued and review the implementation of ongoing initiatives. Emphasised the need for timely… pic.twitter.com/57mIa739if
— Pralhad Joshi (@JoshiPralhad) August 26, 2026
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀಡಲಾದ ನಿರ್ದೇಶನಗಳ ಪ್ರಗತಿಯನ್ನು ಅವಲೋಕಿಸಲಾಯಿತು ಮತ್ತು ಪ್ರಸ್ತುತ ಜಾರಿಯಲ್ಲಿರುವ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಲಾಯಿತು’ ಎಂದಿದ್ದಾರೆ.
ಇದನ್ನೂ ಓದಿ: ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ
‘ಪ್ರತಿಯೊಂದು ಹಂತದಲ್ಲೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದರ ಕಡೆಗೆ ನಿರಂತರ ಗಮನಹರಿಸುವುದರೊಂದಿಗೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆಯ ಅಗತ್ಯತೆಯನ್ನು ಹೇಳಲಾಯಿತು’ ಎಂದು ತಿಳಿಸಿದ್ದಾರೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:46 pm, Wed, 26 August 26




