AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ
ಅಧಿಕಾರಿಗಳೊಂದಿಗೆ ಪ್ರಲ್ಹಾದ್​ ಜೋಶಿ ಸಭೆImage Credit source: x.com/JoshiPralhad
ಗಂಗಾಧರ​ ಬ. ಸಾಬೋಜಿ
|

Updated on:Aug 26, 2026 | 10:48 PM

Share

ದೆಹಲಿ, ಆಗಸ್ಟ್​ 26: ನೀಟ್ ಪ್ರಶ್ನೆಪತ್ರಿಕೆ ಸೊರಿಕೆ ಇಡೀ ದೇಶದಲ್ಲಿ ಹೋರಾಟ ಕ್ರಾಂತಿ ಹುಟ್ಟಿಸಿತ್ತು. ಅಷ್ಟೇ ಅಲ್ಲದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೂ ಕಾರಣವಾಗಿತ್ತು. ಆಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಸೈಲೆಂಟ್ ಆಗಿತ್ತು. ನಂತರ ನೂತನ ಶಿಕ್ಷಣ ಸಚಿವರನ್ನಾಗಿ ಪ್ರಲ್ಹಾದ್​​ ಜೋಶಿಯನ್ನು (Pralhad Joshi) ಕೇಂದ್ರ ಸರ್ಕಾರ ನೇಮಿಸಿತ್ತು. ಅಂದಿನಿಂದ ಈವರೆಗೆ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪ್ರಲ್ಹಾದ್​​ ಜೋಶಿ ನಿರಂತರವಾಗಿ ಉನ್ನತ ಮಟ್ಟದ ಸಭೆಗಳನ್ನು ಮಾಡುತ್ತಿದ್ದಾರೆ. ಇಂದು ಕೂಡ ಉನ್ನತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದು, ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಕಸರತ್ತು ನಡೆಸಿದ್ದಾರೆ.

ಪ್ರತಿ ಹಂತದಲ್ಲೂ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಆದ್ಯತೆ

ಶಿಕ್ಷಣ ಸಚಿವ ಪ್ರಲ್ಹಾದ್​​ ಜೋಶಿ ಇಂದು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಮಹತ್ವದ ಸಭೆ ಮಾಡಿದ್ದು, ಪ್ರಸ್ತುತ ಜಾರಿಯಲ್ಲಿರುವ ವಿವಿಧ ಶೈಕ್ಷಣಿಕ ಉಪಕ್ರಮಗಳ ವಾಸ್ತವ ಅನುಷ್ಠಾನದ ಕುರಿತು ಸಮಗ್ರ ಅವಲೋಕನ ನಡೆಸಿದ್ದಾರೆ.

ಪ್ರಲ್ಹಾದ್​​ ಜೋಶಿ ಟ್ವೀಟ್​

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀಡಲಾದ ನಿರ್ದೇಶನಗಳ ಪ್ರಗತಿಯನ್ನು ಅವಲೋಕಿಸಲಾಯಿತು ಮತ್ತು ಪ್ರಸ್ತುತ ಜಾರಿಯಲ್ಲಿರುವ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಲಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್​ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ

‘ಪ್ರತಿಯೊಂದು ಹಂತದಲ್ಲೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದರ ಕಡೆಗೆ ನಿರಂತರ ಗಮನಹರಿಸುವುದರೊಂದಿಗೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆಯ ಅಗತ್ಯತೆಯನ್ನು ಹೇಳಲಾಯಿತು’ ಎಂದು ತಿಳಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Wed, 26 August 26

Follow Us
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ