AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಎರಡು ವಾರ ತಡವಾಗಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆಗೆ ಸಚಿವರ ಪತ್ರ; ಪತ್ರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಮೇ 16 ರಿಂದ ಶಾಲಾ ಆರಂಭ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ತಿಳಿಸಿದೆ. ಕೊರೊನಾ ಕಾರಣದಿಂದ ಮಕ್ಕಳ ಕಲಿಕೆ ಹಿನ್ನಡೆಯಾಗಿರುವ ಕಾರಣ ಎರಡು ವಾರಗಳ ಬೇಸಿಗೆ ರಜೆ ಕಡಿತ ಮಾಡಿ ಮೇ 16ರಿಂದಲೇ ಶಾಲೆಗಳ ಆರಂಭಕ್ಕೆ ಮುಂದಾಗಿದೆ.

ಕರ್ನಾಟಕದಲ್ಲಿ ಎರಡು ವಾರ ತಡವಾಗಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆಗೆ ಸಚಿವರ ಪತ್ರ; ಪತ್ರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 07, 2022 | 11:57 AM

Share

ಬೆಂಗಳೂರು: ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಬಿಸಿಲು. ಹೀಗಾಗಿ ಮಕ್ಕಳನ್ನು ಶಾಲೆಗೆ (School) ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತೀವ್ರ ತಾಪಮಾನ ಏರಿಕೆ ಹಾಗೂ ಬಿಸಿಲಿನ ಕಾರಣಕ್ಕೆ ಇನ್ನು ಎರಡು ವಾರಗಳ ಬಳಿಕ ಶಾಲೆ ಆರಂಭಿಸುವಂತೆ ಕೋರಿ ಕೆಲವು ಸಚಿವರು, ಪರಿಷತ್ ಸದಸ್ಯರು ಹಾಗೂ ಪೋಷಕರು ಶಿಕ್ಷಣ ಇಲಾಖೆಗೆ (Education Department) ಪತ್ರ ಬರೆದು ಮನವಿ ಮಾಡಿದ್ದಾರೆ. ಮೇ 16 ರಿಂದ ಶಾಲಾ ಆರಂಭ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ತಿಳಿಸಿದೆ. ಕೊರೊನಾ ಕಾರಣದಿಂದ ಮಕ್ಕಳ ಕಲಿಕೆ ಹಿನ್ನಡೆಯಾಗಿರುವ ಕಾರಣ ಎರಡು ವಾರಗಳ ಬೇಸಿಗೆ ರಜೆ ಕಡಿತ ಮಾಡಿ ಮೇ 16ರಿಂದಲೇ ಶಾಲೆಗಳ ಆರಂಭಕ್ಕೆ ಮುಂದಾಗಿದೆ.

ಆದರೆ ಶಾಲೆಗಳ ಆರಂಭ ಮೂಂದುಡಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧಿಸಿದೆ. ಮೇ ತಿಂಗಳ ಕೊನೆಯಲ್ಲಿ ಶಾಲೆಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದ ಶಾಸಕರು, ಸಚಿವರು ಪತ್ರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ಕೊವಿಡ್​ನಿಂದ ಸಾಕಷ್ಟು ಕಲಿಕಾ ಹಿನ್ನಡೆಯಾಗಿದೆ. ಬಿಸಿಲಿನ ವಾತಾವರಣಕ್ಕೆ ಶಾಲೆ ಎರಡು ವಾರ ಮುಂದೂಡುವುದು ಸರಿಯಲ್ಲ. ತಾಪಮಾನ ಏರಿಕೆ ಇರುವ ಜಿಲ್ಲೆಗಳಲ್ಲಿ ಬೆಳಗಿನ ಅವಧಿಯ ನಾಲ್ಕು ಗಂಟೆಗಳ ಕಾಲ ಶಾಲೆ ಆರಂಭ ಮಾಡಬೇಕು. ಸರ್ಕಾರಿ ಶಾಲಾ ಶಿಕ್ಷಕರ ರಜೆ ಕಡಿತದ ಈ ಪೀತೂರಿಗೆ ಶಿಕ್ಷಣ ಇಲಾಖೆ ಮಣಿಯಬಾರದು. ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ.

ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ: ಮೇ‌ 16ರಿಂದ ಜೂನ್ 15ರವರೆಗೆ, ಒಂದು ತಿಂಗಳ ಅವಧಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ 16ರಿಂದಲೇ ಮಕ್ಕಳ ದಾಖಲಾತಿ ಆರಂಭಿಸಿ, ಜುಲೈ 31ರೊಳಗೆ ಮುಗಿಸಬೇಕು. ಮೇ 14ರಿಂದ ತರಗತಿ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಮೇ 16ರಿಂದ 20ರವರೆಗೆ ದಾಖಲಾತಿ ಆಂದೋಲನ ನಡೆಸಬೇಕು. ಜೂನ್ 1ರಿಂದ ಕಲಿಕಾ ಚೇತನ ಕಾರ್ಯಕ್ರಮದಡಿ ಪಠ್ಯ ಬೋಧನೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಈಗಾಗಲೇ ಹೇಳಿದೆ.

ಇದನ್ನೂ ಓದಿ

ನ್ಯಾಯಾಂಗ ನಿಂದನೆ : ಆಂಧ್ರದ 3 ಐಎಎಸ್ ಅಧಿಕಾರಿಗಳಿಗೆ 1 ತಿಂಗಳು ಜೈಲು

ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕಲಬುರಗಿ 11 ಪೊಲೀಸ್ ಸಿಬ್ಬಂದಿ ಅಮಾನತು!

Published On - 11:52 am, Sat, 7 May 22

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!