AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RV ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್ ನೇಮಕ

ಆಡಳಿತ ಮಂಡಳಿಯ ಟ್ರಸ್ಟಿಗಳು ಸಭೆಯಲ್ಲಿ ಸಂಸ್ಥೆಗಳ ಚುಕ್ಕಾಣಿ ಹಿಡಿಯಲು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಶ್ಯಾಮ್ ಅವರ ತಂದೆ, ಹಿರಿಯ ಶಿಕ್ಷಣ ತಜ್ಞ ಎಂ.ಕೆ.ಪಾಂಡುರಂಗ ಶೆಟ್ಟಿ ಅವರ ನಂತರ ಟ್ರಸ್ಟ್‌ನ ಮುಖ್ಯಸ್ಥರಾಗಿದ್ದಾರೆ.

RV ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್ ನೇಮಕ
ಎಂಪಿ ಶ್ಯಾಮ್
TV9 Web
| Updated By: ಆಯೇಷಾ ಬಾನು|

Updated on:May 16, 2022 | 3:22 PM

Share

ಬೆಂಗಳೂರು: ಬೆಂಗಳೂರಿನ ಆರ್‌ವಿ ಗ್ರೂಪ್‌ನ(RV Groups) ಶಿಕ್ಷಣ ಸಂಸ್ಥೆಗಳು ಮತ್ತು ಆರ್‌ವಿ ವಿಶ್ವವಿದ್ಯಾಲಯವನ್ನು ನಡೆಸುವ ಅತ್ಯಂತ ಹಳೆಯ ಶೈಕ್ಷಣಿಕ ಟ್ರಸ್ಟ್‌ಗಳಲ್ಲಿ ಒಂದಾದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್(MP Shyam) (61) ನೇಮಕಗೊಂಡಿದ್ದಾರೆ.

ಆಡಳಿತ ಮಂಡಳಿಯ ಟ್ರಸ್ಟಿಗಳು ಸಭೆಯಲ್ಲಿ ಸಂಸ್ಥೆಗಳ ಚುಕ್ಕಾಣಿ ಹಿಡಿಯಲು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಶ್ಯಾಮ್ ಅವರ ತಂದೆ, ಹಿರಿಯ ಶಿಕ್ಷಣ ತಜ್ಞ ಎಂ.ಕೆ.ಪಾಂಡುರಂಗ ಶೆಟ್ಟಿ ಅವರ ನಂತರ ಟ್ರಸ್ಟ್‌ನ ಮುಖ್ಯಸ್ಥರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಎಂಸಿ ಶಿವಾನಂದ ಶರ್ಮಾ ಅವರು 1940 ರಲ್ಲಿ ಈ ಟ್ರಸ್ಟ್ನ ಸ್ಥಾಪಿಸಿದ್ರು. ಬೆಂಗಳೂರಿನಲ್ಲಿ ಕೇವಲ ಆರು ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಶಾಲೆಯೊಂದಿಗೆ ಈ ಟ್ರಸ್ಟ್ ಪ್ರಾರಂಭವಾಯಿತು. ಇಂದು ಇದು ಎಂಜಿನಿಯರಿಂಗ್ ಮತ್ತು ಡೆಂಟಲ್ ಕಾಲೇಜುಗಳನ್ನು ಒಳಗೊಂಡಂತೆ 20 ಶಾಲೆಗಳು ಮತ್ತು ಕಾಲೇಜುಗಳನ್ನು ನಡೆಸುತ್ತಿದೆ. ಸುಮಾರು 20,000 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

USನಲ್ಲಿ ಶಿಕ್ಷಣ ಪಡೆದ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ಡಾಕ್ಟರೇಟ್ ಪಡೆದಿರುವ ವಿದ್ಯಾವಂತ ಶ್ಯಾಮ್ ಅವರು ಹ್ಯುಂಡೈ, ಹೋಂಡಾ, ಫೋರ್ಡ್, ಮರ್ಸಿಡಿಸ್, JCB ಮತ್ತು ಅಶೋಕ್ ಲೇಲ್ಯಾಂಡ್ ಸೇರಿದಂತೆ ಅಥರ್ ಎಲೆಕ್ಟ್ರಿಕ್, ಆಲ್ಟಿಗ್ರೀನ್ ಮತ್ತು ಫಿಚ್ ಸೇರಿದಂತೆ ಎಲೆಕ್ಟ್ರಿಕ್ ವೆಹಿಕಲ್ ಬ್ರ್ಯಾಂಡ್‌ಗಳ ಜೊತೆಗೆ ಅನುಭವಿ ಆಟೋಮೊಬೈಲ್ ಡೀಲರ್ ಆಗಿದ್ದಾರೆ. ಅಲ್ಲದೆ ಶ್ಯಾಮ್ ಅವರು ಕರ್ನಾಟಕ ಭಾಗದ ಫೆಡರೇಶನ್ ಆಫ್ ಆಟೋ ಡೀಲರ್ಸ್ ಅಸೋಸಿಯೇಶನ್‌ನ ಮುಖ್ಯಸ್ಥರಾಗಿದ್ದಾರೆ.

ಉದ್ಯಮಕ್ಕೆ ಸಂಬಂಧ ಪಟ್ಟ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:12 pm, Mon, 16 May 22

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು