AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023 ವಿಜೇತರಾದ ಜೆಎಸ್‌ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ (2023) ವಿಜೇತರಾಗಿದ್ದಾರೆ.

ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023 ವಿಜೇತರಾದ ಜೆಎಸ್‌ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು
ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯ ಬಹುಮಾನ ಪಡೆಯುತ್ತಿರುವ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ
Rakesh Nayak Manchi
|

Updated on:Mar 13, 2023 | 9:24 PM

Share

ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.

ಇದನ್ನೂ ಓದಿ: ಮಗಳ ಸ್ಕೂಲ್ ಫೀಸ್ ಪಾವತಿಸಲು ಬಡ್ಡಿಗೆ ಸಾಲ ತಂದ ತಾಯಿ; ಶುಲ್ಕ ವಸೂಲಿ ಮಾಡುತ್ತಿರುವ ಹೆಚ್​ಎಂಆರ್ ಶಾಲೆ ವಿರುದ್ಧ ದೂರು ದಾಖಲು

ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Mon, 13 March 23

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ