AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jul 13, 2021 | 1:17 PM

Share

ಸೆಪ್ಟೆಂಬರ್​ನಲ್ಲಿ ನಡೆಯಲಿರುವ ನೀಟ್​-2021 (NEET-2021) ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA-National Testing Agency) ಇಂದಿನಿಂದ (ಜು.13) ಪ್ರಾರಂಭ ಮಾಡಲಿದೆ. NTA ಯ ನೀಟ್​ ವೆಬ್​​ಸೈಟ್​ ಮೂಲಕ ಆನ್​ಲೈನ್​ನಲ್ಲಿಯೇ ನೋಂದಣಿ ಮಾಡಬಹುದಾಗಿದ್ದು, ಇಂದು ಸಂಜೆ 5ಗಂಟೆಯಿಂದ ರಿಜಿಸ್ಟ್ರೇಶನಲ್​ ಲಿಂಕ್​ ಲಭ್ಯವಾಗಲಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ. ಹಾಗೇ 2020ರಲ್ಲಿ ಒಟ್ಟು 3862 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಇನ್ನು ಪರೀಕ್ಷಾರ್ಥಿಗಳು ಎಲ್ಲ ರೀತಿಯ ಕೊವಿಡ್​ 19 ಶಿಷ್ಟಾಚಾರಗಳನ್ನೂ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಪರೀಕ್ಷಾರ್ಥಿಗಳಿಗೆ ಆಯಾ ಕೇಂದ್ರಗಳಲ್ಲಿ ಮಾಸ್ಕ್​​ಗಳನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ನೀಟ್​ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಲಾದ ಸರಳ ವಿಧಾನವನ್ನು ಅನುಸರಿಸಬಹುದು. 1. ಮೊದಲು ಎನ್​ಟಿಎ ನೀಟ್​​ನ ಅಧಿಕೃತ ವೆಬ್​ಸೈಟ್​ ntaneet.nic.in.ಗೆ ಭೇಟಿ ಕೊಡಿ 2. ಅದರ ಹೋಂಪೇಜ್​ನಲ್ಲಿ ಕಾಣುವ NEET 2021 ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ಅಲ್ಲಿ ಲಾಗಿನ್​ ವಿವರಗಳನ್ನು ತುಂಬಿ, ಸಬ್ಮಿಟ್​ ಎಂಬಲ್ಲಿ ಕ್ಲಿಕ್​ ಮಾಡಿ. 4. ನಿಮಗೆ ಅಪ್ಲಿಕೇಶನ್​ ಫಾರಂ ಕಾಣಿಸುತ್ತದೆ. ಅಪ್ಲಿಕೇಶನ್​ನಲ್ಲಿ ಕೇಳಲಾದ ಎಲ್ಲ ವಿವರಗಳನ್ನೂ ತುಂಬಿ ಮತ್ತು ಪರೀಕ್ಷಾ ಶುಲ್ಕವನ್ನೂ ತುಂಬಿ. 5. ದೃಢೀಕರಣ ಪುಟವನ್ನು ಡೌನ್​ಲೋಡ್ ಮಾಡಿಕೊಳ್ಳಿ 6. ಅದರ ಹಾರ್ಡ್​ ಕಾಪಿ ಒಂದನ್ನು ನೀವು ಇಟ್ಟುಕೊಳ್ಳಿ.

ಇದನ್ನೂ ಓದಿ: Cinema Writing : ‘ಬೆಲ್​ ಬಾಟಮ್’ ಟ್ರಂಪ್​ಕಾರ್ಡಿನೊಂದಿಗೆ ಕನ್ನಡದ ನಿರ್ದೇಶಕ ಟಿ.ಕೆ. ದಯಾನಂದ ತೆಲುಗಿಗೆ

NEET 2021 Registration to begin today Check here to know the process

ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ