AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 13, 2021 | 1:17 PM

Share

ಸೆಪ್ಟೆಂಬರ್​ನಲ್ಲಿ ನಡೆಯಲಿರುವ ನೀಟ್​-2021 (NEET-2021) ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA-National Testing Agency) ಇಂದಿನಿಂದ (ಜು.13) ಪ್ರಾರಂಭ ಮಾಡಲಿದೆ. NTA ಯ ನೀಟ್​ ವೆಬ್​​ಸೈಟ್​ ಮೂಲಕ ಆನ್​ಲೈನ್​ನಲ್ಲಿಯೇ ನೋಂದಣಿ ಮಾಡಬಹುದಾಗಿದ್ದು, ಇಂದು ಸಂಜೆ 5ಗಂಟೆಯಿಂದ ರಿಜಿಸ್ಟ್ರೇಶನಲ್​ ಲಿಂಕ್​ ಲಭ್ಯವಾಗಲಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ. ಹಾಗೇ 2020ರಲ್ಲಿ ಒಟ್ಟು 3862 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಇನ್ನು ಪರೀಕ್ಷಾರ್ಥಿಗಳು ಎಲ್ಲ ರೀತಿಯ ಕೊವಿಡ್​ 19 ಶಿಷ್ಟಾಚಾರಗಳನ್ನೂ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಪರೀಕ್ಷಾರ್ಥಿಗಳಿಗೆ ಆಯಾ ಕೇಂದ್ರಗಳಲ್ಲಿ ಮಾಸ್ಕ್​​ಗಳನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ನೀಟ್​ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಲಾದ ಸರಳ ವಿಧಾನವನ್ನು ಅನುಸರಿಸಬಹುದು. 1. ಮೊದಲು ಎನ್​ಟಿಎ ನೀಟ್​​ನ ಅಧಿಕೃತ ವೆಬ್​ಸೈಟ್​ ntaneet.nic.in.ಗೆ ಭೇಟಿ ಕೊಡಿ 2. ಅದರ ಹೋಂಪೇಜ್​ನಲ್ಲಿ ಕಾಣುವ NEET 2021 ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ಅಲ್ಲಿ ಲಾಗಿನ್​ ವಿವರಗಳನ್ನು ತುಂಬಿ, ಸಬ್ಮಿಟ್​ ಎಂಬಲ್ಲಿ ಕ್ಲಿಕ್​ ಮಾಡಿ. 4. ನಿಮಗೆ ಅಪ್ಲಿಕೇಶನ್​ ಫಾರಂ ಕಾಣಿಸುತ್ತದೆ. ಅಪ್ಲಿಕೇಶನ್​ನಲ್ಲಿ ಕೇಳಲಾದ ಎಲ್ಲ ವಿವರಗಳನ್ನೂ ತುಂಬಿ ಮತ್ತು ಪರೀಕ್ಷಾ ಶುಲ್ಕವನ್ನೂ ತುಂಬಿ. 5. ದೃಢೀಕರಣ ಪುಟವನ್ನು ಡೌನ್​ಲೋಡ್ ಮಾಡಿಕೊಳ್ಳಿ 6. ಅದರ ಹಾರ್ಡ್​ ಕಾಪಿ ಒಂದನ್ನು ನೀವು ಇಟ್ಟುಕೊಳ್ಳಿ.

ಇದನ್ನೂ ಓದಿ: Cinema Writing : ‘ಬೆಲ್​ ಬಾಟಮ್’ ಟ್ರಂಪ್​ಕಾರ್ಡಿನೊಂದಿಗೆ ಕನ್ನಡದ ನಿರ್ದೇಶಕ ಟಿ.ಕೆ. ದಯಾನಂದ ತೆಲುಗಿಗೆ

NEET 2021 Registration to begin today Check here to know the process

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು