ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್!

ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆಗಳನ್ನು ಸರ್ಕಾರ ಘೋಷಿಸಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಯಲಿದೆ. ರದ್ದಾಗಿದ್ದ ನೀಟ್-ಯುಜಿ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದ್ದು, ಪತ್ರಿಕೆ ಸೋರಿಕೆ ತಡೆಗೆ "ಶೂನ್ಯ ಸಹನೆ" ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ.

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್!
ಸಾಂದರ್ಭಿಕ ಚಿತ್ರ

Updated on: May 15, 2026 | 3:44 PM

ದೆಹಲಿ, ಮೇ.15: ನೀಟ್-ಯುಜಿ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT Mode) ಮಾದರಿಯಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ.

ಇನ್ನು ರದ್ದುಗೊಂಡಿದ್ದ ನೀಟ್-ಯುಜಿ 2026ರ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದೆ.ಜೂನ್ 14 ರೊಳಗೆ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿಕೊಳ್ಳಲು ಒಂದು ವಾರ ಮುಂಚಿತವಾಗಿ ಅವಕಾಶ ನೀಡಲಾಗುವುದು. ಮರು ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ. ಈ ಹಿಂದೆ ಪಾವತಿಸಿದ್ದ ಪರೀಕ್ಷಾ ಶುಲ್ಕವನ್ನು ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವುದು.

ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, “ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ನಮ್ಮ ಸರ್ಕಾರವು ‘ಶೂನ್ಯ ಸಹನೆ’ (Zero Tolerance) ನೀತಿಯನ್ನು ಹೊಂದಿದೆ. ಪತ್ರಿಕೆ ಸೋರಿಕೆ ಮಾಡಿದ ‘ಮಾಫಿಯಾ’ಗಳು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಸೀಟುಗಳನ್ನು ಕಸಿಯಲು ಬಿಡುವುದಿಲ್ಲ,” ಎಂದು ಎಚ್ಚರಿಸಿದ್ದಾರೆ. ಈ ಹಗರಣದ ಬೇರುಗಳನ್ನು ಪತ್ತೆಹಚ್ಚಲು ಸಿಬಿಐ ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಪೇಪರ್-ಪೆನ್ ಮಾದರಿಯ ಪರೀಕ್ಷೆಯಲ್ಲಿ ಸೋರಿಕೆಯ ಸಾಧ್ಯತೆ ಹೆಚ್ಚಿರುವುದರಿಂದ, ಐಐಟಿ-ಜೆಇಇ ಮಾದರಿಯಲ್ಲಿಯೇ ನೀಟ್ ಪರೀಕ್ಷೆಯನ್ನೂ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ. ಎನ್‌ಟಿಎ (NTA) ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುತ್ತಿದೆ.

ಇದನ್ನೂ ಓದಿ: ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ನಡೆಸಿದ ಉನ್ನತ ಮಟ್ಟದ ತುರ್ತು ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ರದ್ದಾಗಿದ್ದ ಪರೀಕ್ಷೆಗೆ ಹೊಸ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಜೂನ್ 21 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಘೋಷಿಸಲಾಗಿದೆ. ಮೇ 3 ರಂದು ನಡೆದಿದ್ದ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ, ಜೂನ್ 21 ರಂದು ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಸಚಿವಾಲಯ ಹಸಿರು ನಿಶಾನೆ ತೋರಿಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 12:02 pm, Fri, 15 May 26

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us