AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ

NEET MDS Admission | ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 3:00 PM

Share

ನವದೆಹಲಿ: ಆಗಸ್ಟ್​ 20ರಿಂದ ನೀಟ್ ಎಂಡಿಎಸ್​ (NEET MDS 2021) ಕೌನ್ಸಿಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟ್​ಗೆ ಆರೋಗ್ಯ ಸಚಿವಾಲಯದ ತಿಳಿಸಿದೆ. ಆಗಸ್ಟ್​ 20ರಿಂದ ಅಕ್ಟೋಬರ್ 10ರವರೆಗೆ ನೀಟ್ ಎಂಡಿಎಸ್ ಕೌನ್ಸಿಲಿಂಗ್ ನಡೆಯಲಿದೆ. 2020ರ ಡಿಸೆಂಬರ್ 16ರಂದು ನೀಟ್- ಎಂಡಿಎಸ್ ಪರೀಕ್ಷೆ ನಡೆದಿತ್ತು. ಆದರೆ, ಕೊವಿಡ್​ನಿಂದಾಗಿ ಇನ್ನೂ ದಾಖಲಾತಿ ಶುರುವಾಗಿರಲಿಲ್ಲ. 

ಈ ಬಗ್ಗೆ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮತ್ತು ಯೂನಿಯನ್ ಆಫ್ ಇಂಡಿಯಾ ಇಂದು ಸುಪ್ರೀಂ ಕೋರ್ಟ್​ಗೆ ಸಫಿಡವಿಟ್ ಸಲ್ಲಿಸಿವೆ. ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಇಂದು ಎಂಡಿಎಸ್ ಕೌನ್ಸಿಲಿಂಗ್ ದಿನಾಂಕವನ್ನು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ನ್ಯಾಯಮೂರ್ತಿ ಎಂಆರ್ ಶಾ ಅವರ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಯೂನಿಯನ್ ಆಫ್ ಇಂಡಿಯಾ ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

Published On - 2:53 pm, Tue, 10 August 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ