AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ

NEET MDS Admission | ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 3:00 PM

Share

ನವದೆಹಲಿ: ಆಗಸ್ಟ್​ 20ರಿಂದ ನೀಟ್ ಎಂಡಿಎಸ್​ (NEET MDS 2021) ಕೌನ್ಸಿಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟ್​ಗೆ ಆರೋಗ್ಯ ಸಚಿವಾಲಯದ ತಿಳಿಸಿದೆ. ಆಗಸ್ಟ್​ 20ರಿಂದ ಅಕ್ಟೋಬರ್ 10ರವರೆಗೆ ನೀಟ್ ಎಂಡಿಎಸ್ ಕೌನ್ಸಿಲಿಂಗ್ ನಡೆಯಲಿದೆ. 2020ರ ಡಿಸೆಂಬರ್ 16ರಂದು ನೀಟ್- ಎಂಡಿಎಸ್ ಪರೀಕ್ಷೆ ನಡೆದಿತ್ತು. ಆದರೆ, ಕೊವಿಡ್​ನಿಂದಾಗಿ ಇನ್ನೂ ದಾಖಲಾತಿ ಶುರುವಾಗಿರಲಿಲ್ಲ. 

ಈ ಬಗ್ಗೆ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮತ್ತು ಯೂನಿಯನ್ ಆಫ್ ಇಂಡಿಯಾ ಇಂದು ಸುಪ್ರೀಂ ಕೋರ್ಟ್​ಗೆ ಸಫಿಡವಿಟ್ ಸಲ್ಲಿಸಿವೆ. ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಇಂದು ಎಂಡಿಎಸ್ ಕೌನ್ಸಿಲಿಂಗ್ ದಿನಾಂಕವನ್ನು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ನ್ಯಾಯಮೂರ್ತಿ ಎಂಆರ್ ಶಾ ಅವರ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಯೂನಿಯನ್ ಆಫ್ ಇಂಡಿಯಾ ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

Published On - 2:53 pm, Tue, 10 August 21

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ