AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ

NEET MDS Admission | ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 3:00 PM

Share

ನವದೆಹಲಿ: ಆಗಸ್ಟ್​ 20ರಿಂದ ನೀಟ್ ಎಂಡಿಎಸ್​ (NEET MDS 2021) ಕೌನ್ಸಿಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟ್​ಗೆ ಆರೋಗ್ಯ ಸಚಿವಾಲಯದ ತಿಳಿಸಿದೆ. ಆಗಸ್ಟ್​ 20ರಿಂದ ಅಕ್ಟೋಬರ್ 10ರವರೆಗೆ ನೀಟ್ ಎಂಡಿಎಸ್ ಕೌನ್ಸಿಲಿಂಗ್ ನಡೆಯಲಿದೆ. 2020ರ ಡಿಸೆಂಬರ್ 16ರಂದು ನೀಟ್- ಎಂಡಿಎಸ್ ಪರೀಕ್ಷೆ ನಡೆದಿತ್ತು. ಆದರೆ, ಕೊವಿಡ್​ನಿಂದಾಗಿ ಇನ್ನೂ ದಾಖಲಾತಿ ಶುರುವಾಗಿರಲಿಲ್ಲ. 

ಈ ಬಗ್ಗೆ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮತ್ತು ಯೂನಿಯನ್ ಆಫ್ ಇಂಡಿಯಾ ಇಂದು ಸುಪ್ರೀಂ ಕೋರ್ಟ್​ಗೆ ಸಫಿಡವಿಟ್ ಸಲ್ಲಿಸಿವೆ. ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಇಂದು ಎಂಡಿಎಸ್ ಕೌನ್ಸಿಲಿಂಗ್ ದಿನಾಂಕವನ್ನು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ನ್ಯಾಯಮೂರ್ತಿ ಎಂಆರ್ ಶಾ ಅವರ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಯೂನಿಯನ್ ಆಫ್ ಇಂಡಿಯಾ ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

Published On - 2:53 pm, Tue, 10 August 21

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ