AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET PG 2022: ನೀಟ್​ ಪಿಜಿ ಅಪ್ಲಿಕೇಷನ್ ತಿದ್ದುಪಡಿ ವಿಂಡೋ ಓಪನ್; ಬದಲಾವಣೆಗಳನ್ನು ಮಾಡಲು ಹೀಗೆ ಮಾಡಿ

NEET PG 2022 ಪರೀಕ್ಷೆಯನ್ನು ಮೇ 21 ರಂದು ನಡೆಸಲಾಗುವುದು ಮತ್ತು ಫಲಿತಾಂಶಗಳನ್ನು ಜೂನ್ 20, 2022 ರೊಳಗೆ ಪ್ರಕಟಿಸಲಾಗುವುದು.

NEET PG 2022: ನೀಟ್​ ಪಿಜಿ ಅಪ್ಲಿಕೇಷನ್ ತಿದ್ದುಪಡಿ ವಿಂಡೋ ಓಪನ್; ಬದಲಾವಣೆಗಳನ್ನು ಮಾಡಲು ಹೀಗೆ ಮಾಡಿ
ನೀಟ್​ ಪಿಜಿ ಪರೀಕ್ಷೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 29, 2022 | 5:14 PM

NEET PG 2022: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪರೀಕ್ಷೆ (NEET PG) 2022ರ ಅರ್ಜಿ ತಿದ್ದುಪಡಿ ವಿಂಡೋ ಇಂದು (ಮಾರ್ಚ್ 29) ತೆರೆಯಲಿದೆ. ವೈದ್ಯಕೀಯ ಪರೀಕ್ಷೆಯ ಆಕಾಂಕ್ಷಿಗಳು ಈಗಾಗಲೇ ತಮ್ಮ NEET PG 2022 ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಕೆಲವರು ಈಗ ಬದಲಾವಣೆಗಳು ಅಥವಾ ತಿದ್ದುಪಡಿಗಳನ್ನು ಮಾಡಲು ಬಯಸುತ್ತಾರೆ. ಅಂಥವರಿಗೆ ಅರ್ಜಿ ನಮೂನೆಯಲ್ಲಿ ಏಪ್ರಿಲ್ 7ರವರೆಗೆ ಬದಲಾವಣೆಗಳನ್ನು ಮಾಡಲು ಸಾಧ್ಯವಾಗುತ್ತದೆ.

ನೀಟ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ nbe.edu.in ನಲ್ಲಿ ತಮ್ಮ ದಾಖಲೆಗಳೊಂದಿಗೆ ಲಾಗಿನ್ ಆಗಬೇಕು. ನಂತರ ಅಗತ್ಯ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. NEET PG 2022 ಮೇ 21ರಂದು ದೇಶ ಮತ್ತು ವಿದೇಶದಾದ್ಯಂತ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

NEET PG 2022: ಬದಲಾವಣೆಗಳನ್ನು ಮಾಡುವುದು ಹೇಗೆ?

* ಅಧಿಕೃತ ವೆಬ್‌ಸೈಟ್‌ಗೆ nbe.edu.in. ಭೇಟಿ ನೀಡಿ. * ಮುಖಪುಟದಲ್ಲಿ, ‘NEET PG 2022’ ಲಿಂಕ್ ಅನ್ನು ಕ್ಲಿಕ್ ಮಾಡಿ. * ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ. * ಈಗ, ಎಡಿಟ್ ವಿಂಡೋ ಮೇಲೆ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯಲ್ಲಿ ಬದಲಾವಣೆಗಳನ್ನು ಮಾಡಿ. * ಒಮ್ಮೆ ಬದಲಾವಣೆಗಳನ್ನು ಮಾಡಿದ ನಂತರ NEET PG 2022 ಅರ್ಜಿ ನಮೂನೆಯನ್ನು ಸಲ್ಲಿಸಿ. * ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಅಗತ್ಯಕ್ಕಾಗಿ ಹಾರ್ಡ್ ಪ್ರತಿಯನ್ನು ಇಟ್ಟುಕೊಳ್ಳಿ.

NEET PG 2022 ಪರೀಕ್ಷೆಯನ್ನು ಮೇ 21 ರಂದು ನಡೆಸಲಾಗುವುದು ಮತ್ತು ಫಲಿತಾಂಶಗಳನ್ನು ಜೂನ್ 20, 2022 ರೊಳಗೆ ಪ್ರಕಟಿಸಲಾಗುವುದು. NEET PG 2022 ಕುರಿತು ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು NBE nbe.edu.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಇದನ್ನೂ ಓದಿ: ನೀಟ್ ನಿಷೇಧಕ್ಕೆ ಆಗ್ರಹಿಸಿ ಟ್ವಿಟರ್​ನಲ್ಲಿ ಕರವೇ ಅಭಿಯಾನ: 35 ಸಾವಿರ ಟ್ವೀಟ್

NEET-UG: ನೀಟ್ ಯುಜಿ ಪರೀಕ್ಷೆಗೆ ಗರಿಷ್ಠ ವಯಸ್ಸಿನ ಮಿತಿಯ ಮಾನದಂಡ ರದ್ದುಗೊಳಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ