AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-PG Counselling: ನೀಟ್ ಪಿಜಿ ಕೌನ್ಸೆಲಿಂಗ್​ಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

NEET-MDS Counselling: ಆಲ್ ಇಂಡಿಯಾ ಕೋಟಾದಡಿ ಒಬಿಸಿ ಹಾಗೂ ಇಡಬ್ಲುಸಿ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಸಿಂಧುತ್ವದ ಬಗ್ಗೆ ನಿರ್ಧಾರವಾಗುವವರೆಗೂ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸದಂತೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

NEET-PG Counselling: ನೀಟ್ ಪಿಜಿ ಕೌನ್ಸೆಲಿಂಗ್​ಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಸುಪ್ರೀಂಕೋರ್ಟ್​
TV9 Web
| Edited By: |

Updated on:Oct 25, 2021 | 2:06 PM

Share

ನವದೆಹಲಿ: ಒಬಿಸಿ (OBC), ಇಡಬ್ಲುಸಿ (EWC Reservation) ಮೀಸಲಾತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್‌ ಕೌನ್ಸೆಲಿಂಗ್ (NEET -PG Course Counselling) ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಇಂದು ಸೂಚನೆ ನೀಡಿದೆ.

ಕೇಂದ್ರ ಸರ್ಕಾರವು ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿಗಳ ವಿಚಾರಣೆ ಇನ್ನೂ ಮುಗಿದಿಲ್ಲ. ಹೀಗಾಗಿ, ಆಲ್ ಇಂಡಿಯಾ ಕೋಟಾದಡಿ ಒಬಿಸಿ ಹಾಗೂ ಇಡಬ್ಲುಸಿ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಸಿಂಧುತ್ವದ ಬಗ್ಗೆ ನಿರ್ಧಾರವಾಗುವವರೆಗೂ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸದಂತೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

EWS ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8 ಲಕ್ಷ ಆದಾಯ ಮಿತಿ ನಿಗದಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಎಂಡಿಎಸ್ ಕೋರ್ಸ್​ಗಳಿಗೆ ನಡೆಸಬೇಕಾಗಿದ್ದ ಕೌನ್ಸಿಲಿಂಗ್​ಗೆ ತಾತ್ಕಾಲಿಕ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ನೀಟ್ ಪಿಜಿ ಫಲಿತಾಂಶವನ್ನು ಈ ಮೊದಲು ಸೆಪ್ಟೆಂಬರ್ 28ರಂದು ಘೋಷಿಸಲಾಯಿತು. ಅಕ್ಟೋಬರ್ 9ರಂದು ನೀಟ್ ಪರೀಕ್ಷೆಯ ಸ್ಕೋರ್ ಕಾರ್ಡ್ ಬಿಡುಗಡೆ ಮಾಡಲಾಗಿತ್ತು. ನೀಟ್ ಪರೀಕ್ಷೆಯನ್ನು ಈ ಬಾರಿ ಇಂಗ್ಲಿಷ್ ಸೇರಿದಂತೆ 10 ಇತರ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗಿದೆ. ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಯಲ್ಲಿ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ: NEET: ನೀಟ್ ವಿರೋಧಿಸುವ ನಿರ್ಧಾರಕ್ಕೆ ಬೆಂಬಲ ಕೋರಿ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

NEET Reservation: ನೀಟ್ ಅಖಿಲ ಭಾರತ ಮೀಸಲಾತಿ ಬಗ್ಗೆ ಮದ್ರಾಸ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ

Published On - 2:04 pm, Mon, 25 October 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ