NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ

ಇಡೀ ದೇಶಾದ್ಯಂತ ತೀವ್ರ ಪ್ರತಿಭಟನೆ, ವಿವಾದ ಸೃಷ್ಟಿಸಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಘೋಷಿಸಿದೆ. ನೀಟ್​ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ.

NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ
ನೀಟ್​ ಮರು ಪರೀಕ್ಷೆ ಇಲ್ಲ
Follow us
|

Updated on:Jul 23, 2024 | 5:48 PM

ನವದೆಹಲಿ: 2024ರ ನೀಟ್- ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಹೇಳಿದೆ. ಎರಡು ಸ್ಥಳೀಯ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳ ನಂತರ ಪರೀಕ್ಷೆಯ “ವ್ಯವಸ್ಥಿತ ಉಲ್ಲಂಘನೆ” ಅಥವಾ “ಪಾವಿತ್ರ್ಯತೆ” ಅನ್ನು ಸೂಚಿಸುವ ಯಾವುದೇ ಡೇಟಾ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಮರು-ಪರೀಕ್ಷೆಯನ್ನು ನಡೆಸುವ ಆದೇಶವು 23.33 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವೃತ್ತಿಪರರ ಮೇಲೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಹೇಳಿದ್ದಾರೆ.

”ಸದ್ಯದ ಹಂತದಲ್ಲಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗಿದೆ ಅಥವಾ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಎಂಬ ತೀರ್ಮಾನಕ್ಕೆ ಬರುವುದು ಕಷ್ಟ” ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್ ಮತ್ತು ಬಿಹಾರದ ಪಾಟ್ನಾದಲ್ಲಿ ಕನಿಷ್ಠ ಎರಡು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: NEET-UG: ಮುಂದಿನ ಸೂಚನೆಯವರೆಗೆ ನೀಟ್ ಯುಜಿ ಕೌನ್ಸೆಲಿಂಗ್ ಮುಂದೂಡಿಕೆ

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು ತಮ್ಮ ವಾದದಲ್ಲಿ ಮೇ 4ರಂದು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅವರು ಪತ್ರಿಕೆಯ ಸರಿಯಾದ ಉತ್ತರಗಳನ್ನು ನೆನಪಿಟ್ಟುಕೊಳ್ಳುತ್ತಾರೆ. ಪ್ರಶ್ನೆ ಪತ್ರಿಕೆಯ ಸೋರಿಕೆಗೆ ದೀರ್ಘಾವಧಿಯ ಸಮಯ ಬೇಕಾಗುತ್ತದೆ. ಇದು ಕಡಿಮೆ ಸಮಯದಲ್ಲಿ ಸಂಭವಿಸುವುದಿಲ್ಲ ಎಂದಿದ್ದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು NEET ಯುಜಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯ ಸಂದರ್ಭದಲ್ಲಿ, ಪ್ರಶ್ನೆ ಪತ್ರಿಕೆಯ ಭೌತಶಾಸ್ತ್ರದ ಭಾಗದಲ್ಲಿ ವಿವಾದಾತ್ಮಕ ಪ್ರಶ್ನೆಗೆ ಆಯ್ಕೆ 4 ಅನ್ನು ಸರಿಯಾದ ಉತ್ತರವೆಂದು ಗುರುತಿಸಿದವರಿಗೆ ಪೂರ್ಣ ಅಂಕಗಳನ್ನು ನೀಡಲು ಮತ್ತು ಯಾವುದೇ ಅಂಕಗಳನ್ನು ಕಡಿತಗೊಳಿಸದಂತೆ ಪ್ರಸ್ತಾಪಿಸಿದರು. ಆಯ್ಕೆ 2 ಅನ್ನು ಸರಿಯಾದ ಉತ್ತರವೆಂದು ಗುರುತಿಸಲಾಗಿದೆ.

ಇದನ್ನೂ ಓದಿ: NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

ಇದಕ್ಕೂ ಮುನ್ನ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠ ಸೋಮವಾರ ಐಐಟಿ-ದೆಹಲಿಯ ನಿರ್ದೇಶಕರಿಗೆ ಭೌತಶಾಸ್ತ್ರದ ಈ ವಿವಾದಾತ್ಮಕ ಪ್ರಶ್ನೆಗೆ ಸಂಬಂಧಿಸಿದಂತೆ ಮೂವರು ವಿಷಯ ತಜ್ಞರ ತಂಡವನ್ನು ರಚಿಸುವಂತೆ ಮತ್ತು ಮಂಗಳವಾರ ಮಧ್ಯಾಹ್ನದ ವೇಳೆಗೆ ಸರಿಯಾದ ಉತ್ತರದ ಕುರಿತು ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು.

ಇಂದು ಈ ಬಗ್ಗೆ ಉಲ್ಲೇಖಿಸಿದ ಸಿಜೆಐ, ‘ನಮಗೆ ದೆಹಲಿಯ ಐಐಟಿ ವರದಿ ಬಂದಿದೆ. ಐಐಟಿ ನಿರ್ದೇಶಕ ರಂಗನ್ ಬ್ಯಾನರ್ಜಿ ಅವರು ಭೌತಶಾಸ್ತ್ರ ವಿಭಾಗದ ಸಮಿತಿಯನ್ನು ರಚಿಸಿದ್ದಾರೆ ಮತ್ತು ಮೂವರು ತಜ್ಞರ ತಂಡವು ಪ್ರಶ್ನೆಯನ್ನು ಪರಿಶೀಲಿಸಿದೆ ಎಂದು ಅವರು ಹೇಳುತ್ತಾರೆ. ನಾಲ್ಕನೇ ಆಯ್ಕೆಯೇ ಸರಿಯಾದ ಉತ್ತರ ಎಂದು ತಂಡ ಹೇಳಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Tue, 23 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್