AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ

ಇಡೀ ದೇಶಾದ್ಯಂತ ತೀವ್ರ ಪ್ರತಿಭಟನೆ, ವಿವಾದ ಸೃಷ್ಟಿಸಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಘೋಷಿಸಿದೆ. ನೀಟ್​ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ.

NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ
ನೀಟ್​ ಮರು ಪರೀಕ್ಷೆ ಇಲ್ಲ
ಸುಷ್ಮಾ ಚಕ್ರೆ
|

Updated on:Jul 23, 2024 | 5:48 PM

Share

ನವದೆಹಲಿ: 2024ರ ನೀಟ್- ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಹೇಳಿದೆ. ಎರಡು ಸ್ಥಳೀಯ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳ ನಂತರ ಪರೀಕ್ಷೆಯ “ವ್ಯವಸ್ಥಿತ ಉಲ್ಲಂಘನೆ” ಅಥವಾ “ಪಾವಿತ್ರ್ಯತೆ” ಅನ್ನು ಸೂಚಿಸುವ ಯಾವುದೇ ಡೇಟಾ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಮರು-ಪರೀಕ್ಷೆಯನ್ನು ನಡೆಸುವ ಆದೇಶವು 23.33 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವೃತ್ತಿಪರರ ಮೇಲೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಹೇಳಿದ್ದಾರೆ.

”ಸದ್ಯದ ಹಂತದಲ್ಲಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗಿದೆ ಅಥವಾ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಎಂಬ ತೀರ್ಮಾನಕ್ಕೆ ಬರುವುದು ಕಷ್ಟ” ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್ ಮತ್ತು ಬಿಹಾರದ ಪಾಟ್ನಾದಲ್ಲಿ ಕನಿಷ್ಠ ಎರಡು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: NEET-UG: ಮುಂದಿನ ಸೂಚನೆಯವರೆಗೆ ನೀಟ್ ಯುಜಿ ಕೌನ್ಸೆಲಿಂಗ್ ಮುಂದೂಡಿಕೆ

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು ತಮ್ಮ ವಾದದಲ್ಲಿ ಮೇ 4ರಂದು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅವರು ಪತ್ರಿಕೆಯ ಸರಿಯಾದ ಉತ್ತರಗಳನ್ನು ನೆನಪಿಟ್ಟುಕೊಳ್ಳುತ್ತಾರೆ. ಪ್ರಶ್ನೆ ಪತ್ರಿಕೆಯ ಸೋರಿಕೆಗೆ ದೀರ್ಘಾವಧಿಯ ಸಮಯ ಬೇಕಾಗುತ್ತದೆ. ಇದು ಕಡಿಮೆ ಸಮಯದಲ್ಲಿ ಸಂಭವಿಸುವುದಿಲ್ಲ ಎಂದಿದ್ದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು NEET ಯುಜಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯ ಸಂದರ್ಭದಲ್ಲಿ, ಪ್ರಶ್ನೆ ಪತ್ರಿಕೆಯ ಭೌತಶಾಸ್ತ್ರದ ಭಾಗದಲ್ಲಿ ವಿವಾದಾತ್ಮಕ ಪ್ರಶ್ನೆಗೆ ಆಯ್ಕೆ 4 ಅನ್ನು ಸರಿಯಾದ ಉತ್ತರವೆಂದು ಗುರುತಿಸಿದವರಿಗೆ ಪೂರ್ಣ ಅಂಕಗಳನ್ನು ನೀಡಲು ಮತ್ತು ಯಾವುದೇ ಅಂಕಗಳನ್ನು ಕಡಿತಗೊಳಿಸದಂತೆ ಪ್ರಸ್ತಾಪಿಸಿದರು. ಆಯ್ಕೆ 2 ಅನ್ನು ಸರಿಯಾದ ಉತ್ತರವೆಂದು ಗುರುತಿಸಲಾಗಿದೆ.

ಇದನ್ನೂ ಓದಿ: NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

ಇದಕ್ಕೂ ಮುನ್ನ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠ ಸೋಮವಾರ ಐಐಟಿ-ದೆಹಲಿಯ ನಿರ್ದೇಶಕರಿಗೆ ಭೌತಶಾಸ್ತ್ರದ ಈ ವಿವಾದಾತ್ಮಕ ಪ್ರಶ್ನೆಗೆ ಸಂಬಂಧಿಸಿದಂತೆ ಮೂವರು ವಿಷಯ ತಜ್ಞರ ತಂಡವನ್ನು ರಚಿಸುವಂತೆ ಮತ್ತು ಮಂಗಳವಾರ ಮಧ್ಯಾಹ್ನದ ವೇಳೆಗೆ ಸರಿಯಾದ ಉತ್ತರದ ಕುರಿತು ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು.

ಇಂದು ಈ ಬಗ್ಗೆ ಉಲ್ಲೇಖಿಸಿದ ಸಿಜೆಐ, ‘ನಮಗೆ ದೆಹಲಿಯ ಐಐಟಿ ವರದಿ ಬಂದಿದೆ. ಐಐಟಿ ನಿರ್ದೇಶಕ ರಂಗನ್ ಬ್ಯಾನರ್ಜಿ ಅವರು ಭೌತಶಾಸ್ತ್ರ ವಿಭಾಗದ ಸಮಿತಿಯನ್ನು ರಚಿಸಿದ್ದಾರೆ ಮತ್ತು ಮೂವರು ತಜ್ಞರ ತಂಡವು ಪ್ರಶ್ನೆಯನ್ನು ಪರಿಶೀಲಿಸಿದೆ ಎಂದು ಅವರು ಹೇಳುತ್ತಾರೆ. ನಾಲ್ಕನೇ ಆಯ್ಕೆಯೇ ಸರಿಯಾದ ಉತ್ತರ ಎಂದು ತಂಡ ಹೇಳಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Tue, 23 July 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು