AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

NEET UG 2024 results: ಮೆಡಿಕಲ್ ಕೋರ್ಸ್​ಗಳ ಪ್ರವೇಶಕ್ಕೆ ನಡೆಸಲಾಗುವ ನೀಟ್ ಯುಜಿ ಪರೀಕ್ಷೆ ಫಲಿತಾಂಶ ನಿನ್ನೆ ಜುಲೈ 20ರಂದು ಪ್ರಕಟವಾಗಿದೆ. 23 ಲಕ್ಷ ವಿದ್ಯಾರ್ಥಿಗಳ ಪೈಕಿ 30,000ಕ್ಕೂ ಹೆಚ್ಚು ಅಭ್ಯರ್ಥಿಗಳು 650ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಕೋಚಿಂಗ್ ಸೆಂಟರ್​ಗಳು ಹೆಚ್ಚು ಕೇಂದ್ರಿತವಾಗಿರುವ ಪ್ರದೇಶಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಗಳಿಸಿದ್ದಾರೆ. ನೀಟ್ ಪರೀಕ್ಷೆಯ ಫಲಿತಾಂಶ ಇಲ್ಲಿ ಕಾಣಬಹುದು: exams.nta.ac.in/NEET

NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್
ಪರೀಕ್ಷೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 11:45 AM

ನವದೆಹಲಿ, ಜುಲೈ 21: ವಿವಾದಕ್ಕೆ ಸಿಲುಕಿರುವ ನೀಟ್ ಪರೀಕ್ಷೆಯ ಫಲಿತಾಂಶ ನಿನ್ನೆ ಶನಿವಾರ ಪ್ರಕಟಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್​ಟಿಎ ನಗರವಾರು ಮತ್ತು ಪರೀಕ್ಷಾ ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸಿದೆ. ದೇಶಾದ್ಯಂತ ವಿವಿಧ ನಗರಗಳಲ್ಲಿನ 4,750 ಸೆಂಟರ್​ಗಳಲ್ಲಿ 32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕುತೂಹಲ ಎಂದರೆ ಪೇಪರ್ ಲೀಕ್ ಸೇರಿದಂತೆ ಅಕ್ರಮ ನಡೆಸಲಾಗಿತ್ತು ಎಂದು ಆರೋಪಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ರಿಸಲ್ಟ್ ಕಳಪೆಯಾಗಿ ಬಂದಿದೆ. ಕೆಲ ಸೆಂಟರ್​ಗಳಲ್ಲಿ ಬಹಳ ಉತ್ತಮ ಎನಿಸುವ ರಿಸಲ್ಟ್ ಬಂದಿದೆ.

ಗುಜರಾತ್​ನ ರಾಜ್​ಕೋಟ್​ನಲ್ಲಿರುವ ಅರ್​ಕೆ ಯೂನಿವರ್ಸಿಟಿಯ ಎಂಜಿನಿಯರಿಂಗ್ ಸ್ಕೂಲ್, ರಾಜಸ್ಥಾನದ ಸಿಕರ್ ನಗರದ ಟಾಗೂರ್ ಪಿಜಿ ಕಾಲೇಜು, ಮಂಗಲ್ ಚಂದ್ ದಿದ್ವಾನಿಯಾ ವಿದ್ಯಾಮಂದಿರ, ಅರಾವಳಿ ಪಬ್ಲಿಕ್ ಸ್ಕೂಲ್, ಕೇರಳದ ಕೊಟ್ಟಾಯಾಂನ ಚಿನ್ಮಯ ವಿದ್ಯಾಲಯ, ರೋಹ್ಟಕ್​ನ ಮಾಡಲ್ ಸ್ಕೂಲ್ ಮೊದಲಾದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ತಮ ಅಂಕ ಗಳಿಸಿದ್ದಾರೆ.

ಇದನ್ನೂ ಓದಿ: NEET-UG case: ‘ಮಾಸ್ಟರ್‌ಮೈಂಡ್’, ‘ಸಾಲ್ವರ್’ ಆಗಿ ಕೆಲಸ ಮಾಡಿದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ

ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ಫಲಿತಾಂಶ

ನೀಟ್ ಯುಜಿ ಪರೀಕ್ಷೆಯಲ್ಲಿನ ಒಟ್ಟಾರೆ 720 ಅಂಕಗಳಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಕೆಲ ನಗರಗಳಲ್ಲಿ ಹೆಚ್ಚಿದೆ. ರಾಜಸ್ಥಾನದ ಸಿಕರ್​ನಲ್ಲಿ ಒಟ್ಟು 27,000 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,200 ಮಂದಿ 600ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 2,000ಕ್ಕೂ ಹೆಚ್ಚು ಮಂದಿ 450 ಅಂಕಗಳಿಗಿಂತ ಹೆಚ್ಚು ಪಡೆದಿದ್ದಾರೆ. ಕುತೂಹಲ ಎಂದರೆ ಸಿಕರ್ ನಗರವು ನೀಟ್ ಯುಜಿ ಕೋಚಿಂಗ್ ಸೆಂಟರ್​ಗಳಿಗೆ ಹೆಸರುವಾಸಿಯಾಗಿದೆ. ಅಧಿಕ ಸಂಖ್ಯೆಯಲ್ಲಿ ಕೋಚಿಂಗ್ ಸೆಂಟರ್​ಗಳು ಇಲ್ಲಿವೆ. ಇದೇ ಸಿಕರ್​​ನ ಮಂಗಲ್ ಚಂದ್ ದಿದ್ವಾನಿಯಾ ವಿದ್ಯಾಮಂದಿರ ಪರೀಕ್ಷಾ ಕೇಂದ್ರದಲ್ಲಿ 114 ಮಕ್ಕಳು 600ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 45 ಮಕ್ಕಳು 650 ಅಂಕಗಳನ್ನು, ನಾಲ್ವರು ಮಕ್ಕಳು 700 ಅಂಕಗಳ ಗಡಿಯನ್ನು ದಾಟಿದ್ದಾರೆ.

ಕುತೂಹಲ ಎಂದರೆ, ಸಿಕರ್ ರೀತಿ ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ಫಲಿತಾಂಶ ಬಂದಿದೆ. ಗುಜರಾತ್​ನ ರಾಜಕೋಟ್​ನ ಆರ್​ಕೆ ಯೂನಿವರ್ಸಿಟಿ ಎಂಜಿನಿಯರಿಂಗ್ ಸ್ಕೂಲ್ ಕೇಂದ್ರದಲ್ಲಿ 12 ವಿದ್ಯಾರ್ಥಿಗಳು 700ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 240ಕ್ಕೂ ಹೆಚ್ಚು ಮಕ್ಕಳು 600 ಅಂಕಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ

ದೇಶಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ. 1.3ರಷ್ಟು ಮಕ್ಕಳು, ಅಂದರೆ 30,204 ಮಕ್ಕಳು 650 ಅಂಕಗಳ ಗಡಿ ದಾಟಿದ್ದಾರೆ. 79,500 ಅಭ್ಯರ್ಥಿಗಳು 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕೆ ನಡೆಸಲಾಗುವ ಈ ನೀಟ್ ಯುಜಿ ಪರೀಕ್ಷೆಯಲ್ಲಿ 30,000 ದೊಳಗೆ ರ‍್ಯಾಂಕಿಂಗ್ ಪಡೆದವರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಸಿಗುತ್ತದೆ. 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ಮಕ್ಕಳು ಈ ರ‍್ಯಾಂಕಿಂಗ್ ಮಿತಿಯಲ್ಲಿ ಬರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಸಿಕರ್, ಕೋಟಾ ಮೊದಲಾದ ನಗರಗಳಲ್ಲಿನ ಮಕ್ಕಳು ಅಧಿಕ ಸಂಖ್ಯೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರವೇಶಿಸುವ ಅವಕಾಶ ಇದೆ.

ನೀಟ್ ಪರೀಕ್ಷೆ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: exams.nta.ac.in/NEET/

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ