AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

NEET UG 2024 results: ಮೆಡಿಕಲ್ ಕೋರ್ಸ್​ಗಳ ಪ್ರವೇಶಕ್ಕೆ ನಡೆಸಲಾಗುವ ನೀಟ್ ಯುಜಿ ಪರೀಕ್ಷೆ ಫಲಿತಾಂಶ ನಿನ್ನೆ ಜುಲೈ 20ರಂದು ಪ್ರಕಟವಾಗಿದೆ. 23 ಲಕ್ಷ ವಿದ್ಯಾರ್ಥಿಗಳ ಪೈಕಿ 30,000ಕ್ಕೂ ಹೆಚ್ಚು ಅಭ್ಯರ್ಥಿಗಳು 650ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಕೋಚಿಂಗ್ ಸೆಂಟರ್​ಗಳು ಹೆಚ್ಚು ಕೇಂದ್ರಿತವಾಗಿರುವ ಪ್ರದೇಶಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಗಳಿಸಿದ್ದಾರೆ. ನೀಟ್ ಪರೀಕ್ಷೆಯ ಫಲಿತಾಂಶ ಇಲ್ಲಿ ಕಾಣಬಹುದು: exams.nta.ac.in/NEET

NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್
ಪರೀಕ್ಷೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 11:45 AM

Share

ನವದೆಹಲಿ, ಜುಲೈ 21: ವಿವಾದಕ್ಕೆ ಸಿಲುಕಿರುವ ನೀಟ್ ಪರೀಕ್ಷೆಯ ಫಲಿತಾಂಶ ನಿನ್ನೆ ಶನಿವಾರ ಪ್ರಕಟಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್​ಟಿಎ ನಗರವಾರು ಮತ್ತು ಪರೀಕ್ಷಾ ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸಿದೆ. ದೇಶಾದ್ಯಂತ ವಿವಿಧ ನಗರಗಳಲ್ಲಿನ 4,750 ಸೆಂಟರ್​ಗಳಲ್ಲಿ 32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕುತೂಹಲ ಎಂದರೆ ಪೇಪರ್ ಲೀಕ್ ಸೇರಿದಂತೆ ಅಕ್ರಮ ನಡೆಸಲಾಗಿತ್ತು ಎಂದು ಆರೋಪಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ರಿಸಲ್ಟ್ ಕಳಪೆಯಾಗಿ ಬಂದಿದೆ. ಕೆಲ ಸೆಂಟರ್​ಗಳಲ್ಲಿ ಬಹಳ ಉತ್ತಮ ಎನಿಸುವ ರಿಸಲ್ಟ್ ಬಂದಿದೆ.

ಗುಜರಾತ್​ನ ರಾಜ್​ಕೋಟ್​ನಲ್ಲಿರುವ ಅರ್​ಕೆ ಯೂನಿವರ್ಸಿಟಿಯ ಎಂಜಿನಿಯರಿಂಗ್ ಸ್ಕೂಲ್, ರಾಜಸ್ಥಾನದ ಸಿಕರ್ ನಗರದ ಟಾಗೂರ್ ಪಿಜಿ ಕಾಲೇಜು, ಮಂಗಲ್ ಚಂದ್ ದಿದ್ವಾನಿಯಾ ವಿದ್ಯಾಮಂದಿರ, ಅರಾವಳಿ ಪಬ್ಲಿಕ್ ಸ್ಕೂಲ್, ಕೇರಳದ ಕೊಟ್ಟಾಯಾಂನ ಚಿನ್ಮಯ ವಿದ್ಯಾಲಯ, ರೋಹ್ಟಕ್​ನ ಮಾಡಲ್ ಸ್ಕೂಲ್ ಮೊದಲಾದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಬಹಳ ಉತ್ತಮ ಅಂಕ ಗಳಿಸಿದ್ದಾರೆ.

ಇದನ್ನೂ ಓದಿ: NEET-UG case: ‘ಮಾಸ್ಟರ್‌ಮೈಂಡ್’, ‘ಸಾಲ್ವರ್’ ಆಗಿ ಕೆಲಸ ಮಾಡಿದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ

ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ಫಲಿತಾಂಶ

ನೀಟ್ ಯುಜಿ ಪರೀಕ್ಷೆಯಲ್ಲಿನ ಒಟ್ಟಾರೆ 720 ಅಂಕಗಳಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಕೆಲ ನಗರಗಳಲ್ಲಿ ಹೆಚ್ಚಿದೆ. ರಾಜಸ್ಥಾನದ ಸಿಕರ್​ನಲ್ಲಿ ಒಟ್ಟು 27,000 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,200 ಮಂದಿ 600ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 2,000ಕ್ಕೂ ಹೆಚ್ಚು ಮಂದಿ 450 ಅಂಕಗಳಿಗಿಂತ ಹೆಚ್ಚು ಪಡೆದಿದ್ದಾರೆ. ಕುತೂಹಲ ಎಂದರೆ ಸಿಕರ್ ನಗರವು ನೀಟ್ ಯುಜಿ ಕೋಚಿಂಗ್ ಸೆಂಟರ್​ಗಳಿಗೆ ಹೆಸರುವಾಸಿಯಾಗಿದೆ. ಅಧಿಕ ಸಂಖ್ಯೆಯಲ್ಲಿ ಕೋಚಿಂಗ್ ಸೆಂಟರ್​ಗಳು ಇಲ್ಲಿವೆ. ಇದೇ ಸಿಕರ್​​ನ ಮಂಗಲ್ ಚಂದ್ ದಿದ್ವಾನಿಯಾ ವಿದ್ಯಾಮಂದಿರ ಪರೀಕ್ಷಾ ಕೇಂದ್ರದಲ್ಲಿ 114 ಮಕ್ಕಳು 600ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 45 ಮಕ್ಕಳು 650 ಅಂಕಗಳನ್ನು, ನಾಲ್ವರು ಮಕ್ಕಳು 700 ಅಂಕಗಳ ಗಡಿಯನ್ನು ದಾಟಿದ್ದಾರೆ.

ಕುತೂಹಲ ಎಂದರೆ, ಸಿಕರ್ ರೀತಿ ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ಫಲಿತಾಂಶ ಬಂದಿದೆ. ಗುಜರಾತ್​ನ ರಾಜಕೋಟ್​ನ ಆರ್​ಕೆ ಯೂನಿವರ್ಸಿಟಿ ಎಂಜಿನಿಯರಿಂಗ್ ಸ್ಕೂಲ್ ಕೇಂದ್ರದಲ್ಲಿ 12 ವಿದ್ಯಾರ್ಥಿಗಳು 700ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. 240ಕ್ಕೂ ಹೆಚ್ಚು ಮಕ್ಕಳು 600 ಅಂಕಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ

ದೇಶಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ. 1.3ರಷ್ಟು ಮಕ್ಕಳು, ಅಂದರೆ 30,204 ಮಕ್ಕಳು 650 ಅಂಕಗಳ ಗಡಿ ದಾಟಿದ್ದಾರೆ. 79,500 ಅಭ್ಯರ್ಥಿಗಳು 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕೆ ನಡೆಸಲಾಗುವ ಈ ನೀಟ್ ಯುಜಿ ಪರೀಕ್ಷೆಯಲ್ಲಿ 30,000 ದೊಳಗೆ ರ‍್ಯಾಂಕಿಂಗ್ ಪಡೆದವರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಸಿಗುತ್ತದೆ. 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ಮಕ್ಕಳು ಈ ರ‍್ಯಾಂಕಿಂಗ್ ಮಿತಿಯಲ್ಲಿ ಬರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಸಿಕರ್, ಕೋಟಾ ಮೊದಲಾದ ನಗರಗಳಲ್ಲಿನ ಮಕ್ಕಳು ಅಧಿಕ ಸಂಖ್ಯೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರವೇಶಿಸುವ ಅವಕಾಶ ಇದೆ.

ನೀಟ್ ಪರೀಕ್ಷೆ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: exams.nta.ac.in/NEET/

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​