AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ, ಎನ್​ಟಿಎಗೆ ನೋಟಿಸ್​ ಜಾರಿ

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ಸುಪ್ರೀಂಕೋರ್ಟ್​ ನೋಟಿಸ್ ನೀಡಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ,  ಎನ್​ಟಿಎಗೆ ನೋಟಿಸ್​ ಜಾರಿ
ನಯನಾ ರಾಜೀವ್
|

Updated on: Jun 11, 2024 | 12:27 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು.

2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

ಮತ್ತಷ್ಟು ಓದಿ: NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ