AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ, ಎನ್​ಟಿಎಗೆ ನೋಟಿಸ್​ ಜಾರಿ

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ಸುಪ್ರೀಂಕೋರ್ಟ್​ ನೋಟಿಸ್ ನೀಡಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ,  ಎನ್​ಟಿಎಗೆ ನೋಟಿಸ್​ ಜಾರಿ
ನಯನಾ ರಾಜೀವ್
|

Updated on: Jun 11, 2024 | 12:27 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು.

2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

ಮತ್ತಷ್ಟು ಓದಿ: NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!