AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ, ಎನ್​ಟಿಎಗೆ ನೋಟಿಸ್​ ಜಾರಿ

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ಸುಪ್ರೀಂಕೋರ್ಟ್​ ನೋಟಿಸ್ ನೀಡಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ,  ಎನ್​ಟಿಎಗೆ ನೋಟಿಸ್​ ಜಾರಿ
ನಯನಾ ರಾಜೀವ್
|

Updated on: Jun 11, 2024 | 12:27 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು.

2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

ಮತ್ತಷ್ಟು ಓದಿ: NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರ್​ಸಿಬಿ ಚಾಂಪಿಯನ್ ಸಂಭ್ರಮಾಚರಣೆ ಹೇಗಿತ್ತು ನೋಡಿ
ಆರ್​ಸಿಬಿ ಚಾಂಪಿಯನ್ ಸಂಭ್ರಮಾಚರಣೆ ಹೇಗಿತ್ತು ನೋಡಿ
ಫೈನಲ್​ನಲ್ಲಿ 23 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ಸ್ಮೃತಿ
ಫೈನಲ್​ನಲ್ಲಿ 23 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ಸ್ಮೃತಿ
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ