AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಕೇಂದ್ರ ಶಿಕ್ಷಣ ಸಚಿವರ ತುರ್ತು ಸಭೆಯಲ್ಲಿ ಮರುಪರೀಕ್ಷೆ ಮತ್ತು ಭವಿಷ್ಯದ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಸಿಬಿಐ ತನಿಖೆ ತೀವ್ರಗೊಂಡಿದ್ದು, ಎನ್‌ಟಿಎ ಒಳಗಿನವರ ಕೈವಾಡದ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಆರೋಪಿಗಳ ಬಂಧನ, ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಒತ್ತಾಯ ಹೆಚ್ಚಿದೆ.

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
| Edited By: |

Updated on:Jul 03, 2026 | 2:44 PM

Share

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ (ಮೇ,14) ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೀಗ ಇದರ ಜತೆಗೆ ಮಹತ್ವದ ಘೋಷಣೆಯನ್ನು ಕೂಡ ಮಾಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ.  ಜೂನ್ 21 ರಂದು ನಡೆಯಲಿದೆ.

ನಿನ್ನೆ (ಮೇ.14) ರಾತ್ರಿ ನೀಟ್​ ಪರೀಕ್ಷೆ ನಡೆಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯು ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸುದೀರ್ಘವಾಗಿ ಚರ್ಚಿಸಿತು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇಲ್ಲಿದೆ ನೋಡಿ ಪೋಸ್ಟ್​​:

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ. ಇದೊಂದು “ಸಂಘಟಿತ ಗ್ಯಾಂಗ್” ನಡೆಸುತ್ತಿರುವ ದಂಧೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ರಾಜಸ್ಥಾನದ ಸೀಕರ್ ಜಿಲ್ಲೆಯ ಕೋಚಿಂಗ್ ಸೆಂಟರ್‌ಗಳಿಗೆ ಈ ಸೋರಿಕೆಯಾದ ಪತ್ರಿಕೆ ತಲುಪಿದ್ದು, ಪ್ರತಿ ವಿದ್ಯಾರ್ಥಿಯಿಂದ 2 ರಿಂದ 5 ಲಕ್ಷ ರೂ. ಪಡೆಯಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ದೆಹಲಿ, ಅಹಮದಾಬಾದ್ ಸೇರಿದಂತೆ ಹಲವು ಕಡೆ ವಿದ್ಯಾರ್ಥಿ ಸಂಘಟನೆಗಳು ಎನ್‌ಟಿಎ ರದ್ದುಪಡಿಸಲು ಮತ್ತು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ.ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆ ರದ್ದಾದ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸತಿ ವೈದ್ಯರ ಸಂಘದ ಒಕ್ಕೂಟ (FORDA) ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದು, ನೀಟ್ ಪರೀಕ್ಷೆಯನ್ನು ಪೆನ್-ಪೇಪರ್ ಬದಲಿಗೆ ಐಐಟಿ-ಜೆಇಇ ಮಾದರಿಯಲ್ಲಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವಂತೆ ಒತ್ತಾಯಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Fri, 15 May 26

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ