AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ

ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೊಸ ಕೊಂಡಿ ಪತ್ತೆಯಾಗಿದೆ. ಸಿಬಿಐ ಕಾರ್ಯಾಚರಣೆ ನಡೆಸಿ ಪ್ರಮುಖ ಶಂಕಿತನನ್ನು ಬಂಧಿಸಿದೆ. ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ತೀವ್ರಗೊಂಡಿದೆ. ಮೊಬೈಲ್ ದತ್ತಾಂಶಗಳ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಹಗರಣದಲ್ಲಿ ಇನ್ನೂ ದೊಡ್ಡ ವ್ಯಕ್ತಿಗಳು ಸಿಲುಕುವ ಸಾಧ್ಯತೆ ಇದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 12, 2026 | 3:18 PM

Share

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ನಾಸಿಕ್‌ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗದೆ, ನಾಸಿಕ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಂಚಿಕೆಯಾಗಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಶಂಕಿತನ ಮೊಬೈಲ್ ಮತ್ತು ಲಾಪ್ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಟ್ಸಾಪ್ ಸಂದೇಶಗಳ ಮೂಲಕ ಪತ್ರಿಕೆ ಸೋರಿಕೆಯಾಗಿರುವ ದತ್ತಾಂಶಗಳನ್ನು ಸಿಬಿಐ ಸಂಗ್ರಹಿಸುತ್ತಿದೆ. ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಹೊಸ ನಂಟಿನಿಂದಾಗಿ ಇನ್ನಷ್ಟು ದೊಡ್ಡ ವ್ಯಕ್ತಿಗಳು ಸಿಬಿಐ ಬಲೆಗೆ ಬೀಳುವ ಸಾಧ್ಯತೆಯಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ