AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEP: ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸುಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಮಾರಕ ಕಾಯಿಲೆಗೆ ಸ್ವಮೂತ್ರ ಪಾನವೇ ಮದ್ದು ಎಂಬ ವಿಷಯ ಉಲ್ಲೇಖದ ಬಗ್ಗೆ ವಿದ್ಯಾರ್ಥೀ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಲಾಗುತ್ತಿದೆ.

NEP: ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸುಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ
ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ
TV9 Web
| Edited By: |

Updated on:Nov 18, 2022 | 11:22 AM

Share

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (New National Education Policy) ಒಂದಲ್ಲಾ ಒಂದು ರೀತಿಯಲ್ಲಿ ವಿವಾದ (Controversy)ಕ್ಕೆ, ಟೀಕೆಗೆ, ವಿರೊಧಕ್ಕೆ ಕಾರಣವಾಗುತ್ತಿದೆ. ದೇಶದಲ್ಲಿ ಜಾರಿಗೆ ಭಾರೀ ವಿರೋಧಕ್ಕೆ ಕಾರಣವಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ (Mysore University)ದ ಪಠ್ಯಕ್ರಮದಲ್ಲಿ, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್ (AIDS and Cancer)​ಗೆ ಸ್ವಮೂತ್ರ (Urine) ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿದೆ. ಸದ್ಯ ಇದು ವಿವಾದ ಪಡೆದುಕೊಂಡಿದ್ದು, ವಿದ್ಯಾರ್ಥಿ ಸಂಘಟನೆಗಳು ಅವೈಜ್ಞಾನಿಕ ಪಠ್ಯಕ್ರಮದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳಿಂದ ವಿವಾದಾತ್ಮಕ ಪಠ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಹೇಳಿರುವುದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಟೀಕೆ ಮಾಡಲಾಗುತ್ತಿದೆ. ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ, ಮೂತ್ರ ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ

ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೆ ಹೊರತು ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಬಾರದು. ಈ ಕೂಡಲೇ ಪಠ್ಯವನ್ನು ಹಿಂಪಡೆಯಬೇಕು ಎಂದು AIDSO ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ. ಅಲ್ಲದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ಪ್ರಜಾತಂತ್ರ, ಧರ್ಮ ನಿರಪೇಕ್ಷತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದ್ದಾರೆ.

ಅವೈಜ್ಞಾನಿಕ ಪಠ್ಯ ಹಿಂಪಡೆಗೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಅವೈಜ್ಞಾನಿಕ ಶಿಕ್ಷಣ ಪದ್ಧತಿಯನ್ನು ರೂಪಿಸುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Fri, 18 November 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್