AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2021 Exam: ನೀಟ್ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ; ವೆಬ್​ಸೈಟ್​ ಲಿಂಕ್ ಇಲ್ಲಿದೆ

NTA NEET Entrance Exam | ನೀಟ್ ಯುಜಿ ಪ್ರವೇಶ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ntaneet.nic.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ನಾಳೆ (ಆ. 10) ಕೊನೆಯ ದಿನವಾಗಿದೆ.

NEET 2021 Exam: ನೀಟ್ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ; ವೆಬ್​ಸೈಟ್​ ಲಿಂಕ್ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 09, 2021 | 1:01 PM

Share

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG Exam 2021) ನೋಂದಣಿ ಪ್ರಕ್ರಿಯೆ ನಾಳೆಗೆ (ಆಗಸ್ಟ್ 10) ಮುಕ್ತಾಯಗೊಳ್ಳಲಿದೆ. ನೀಟ್ ಯುಜಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ನಾಳೆಯೊಳಗೆ ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸೆಪ್ಟೆಂಬರ್ 12ಕ್ಕೆ ನೀಟ್ ಪರೀಕ್ಷೆ ನಡೆಯಲಿದ್ದು, ಇಂಗ್ಲಿಷ್, ಕನ್ನಡ, ಹಿಂದಿ, ಅಸ್ಸಾಮೀಸ್, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಉರ್ದು ಈ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ನೀಟ್ ಯುಜಿ ಪ್ರವೇಶ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ntaneet.nic.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇಲ್ಲಿರುವ ಫಾರ್ಮ್​ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ತುಂಬಬೇಕು. ಹಾಗೇ, ನೀಟ್ ಪರೀಕ್ಷೆಯ ಶುಲ್ಕವನ್ನು ಕಟ್ಟಿ, ಅಲ್ಲಿ ಕೇಳಲಾಗಿರುವ ದಾಖಲಾತಿಗಳನ್ನು ಅಪ್​ಲೋಡ್ ಮಾಡಬೇಕು. ಬಳಿಕ ನೀವು ಶುಲ್ಕ ಪಾವತಿಸಿದ ದೃಢೀಕರಣ ಪತ್ರವನ್ನು ಡೌನ್​ಲೋಡ್ ಮಾಡಿಕೊಳ್ಳಿ. ಈ ಬಾರಿ ನೀಟ್ ಪರೀಕ್ಷೆ ಪೇಪರ್ ಮತ್ತು ಪೆನ್​ ಮೋಡ್​ನಲ್ಲಿರಲಿದೆ.

ಎಂಬಿಬಿಎಸ್. ಬಿಡಿಎಸ್, ಬಿಎಎಂಎಸ್, ಬಿಯುಎಂಎಸ್, ಬಿಎಚ್​ಎಂಎಸ್ ಕೋರ್ಸ್​ಗಳ ಪ್ರವೇಶಾತಿಗೆ ನೀಟ್ ಪರೀಕ್ಷೆಯ ಫಲಿತಾಂಶವನ್ನು ಬಳಸಬಹುದು. ಭಾರತದಲ್ಲಿ ಮಾತ್ರವಲ್ಲದೆ ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ಸಮುದಾಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಬಾರಿ ಕುವೈತ್​ ಹಾಗೂ ದುಬೈನಲ್ಲಿ ಕೂಡ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಒಟ್ಟು 198 ಕೇಂದ್ರಗಳಲ್ಲಿ ಈ ಬಾರಿ ನೀಟ್ ಪರೀಕ್ಷೆಗಳು ನಡೆಯಲಿದೆ. ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗಳಿಗೆ ನೀಟ್ ಪರೀಕ್ಷೆಯ ಮೂಲಕ ಸೇರಲಿಚ್ಛಿಸುವ ಅಭ್ಯರ್ಥಿಗಳಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಡಿಸೆಂಬರ್ 31ರ ವೇಳೆಗೆ ಕನಿಷ್ಠ 17 ವರ್ಷ ಪೂರ್ತಿಯಾಗಬೇಕು. ದೇಶದ ನಾನಾ ಕಾಲೇಜುಗಳಲ್ಲಿ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳು ಆ ಕಾಲೇಜು/ ವಿಶ್ವವಿದ್ಯಾಲಯ/ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿಕೊಳ್ಳಬೇಕು. ಬಿಎಸ್​ಸಿ ನರ್ಸಿಂಗ್​ಗೆ ಸೇರಲಿಚ್ಛಿಸುವ ಅಭ್ಯರ್ಥಿಗಳು ಪಿಸಿಬಿ (ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ) ಹಾಗೂ ಇಂಗ್ಲಿಷ್​ನಲ್ಲಿ ಶೇ. 45 ಅಂಕಗಳನ್ನಾದರೂ ಪಡೆದಿರಬೇಕು. ಪಿಯುಸಿಯಲ್ಲಿ ಪಿಸಿಬಿ ಕಾಂಬಿನೇಷನ್ ಪಡೆದಿರಬೇಕು ಎಂದು ಶೈಕ್ಷಣಿಕ ಅರ್ಹತೆಯ ಬಗ್ಗೆ ಎನ್​ಟಿಎ ತಿಳಿಸಿದೆ.

ಹಾಗೇ, ಎಸ್​ಸಿ/ ಎಸ್​ಟಿ ಅಥವಾ ಒಬಿಸಿ ಸಮುದಾಯಕ್ಕೆ ಸೇರಿರುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಪಿಸಿಬಿ ಕಾಂಬಿನೇಷನ್ ಪಡೆದು ಶೇ. 40ರಷ್ಟು ಅಂಕವನ್ನು ಗಳಿಸಿರಬೇಕು. ಜನರಲ್ ಕೆಟಗರಿಯವರಾದರೆ ಶೇ. 45ರಷ್ಟು ಅಂಕ ಪಡೆದಿರಬೇಕು. ಹಾಗೇ. ದಿವ್ಯಾಂಗರಿಗೆ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಅವರಿಗೂ ಶೈಕ್ಷಣಿಕ ಅರ್ಹತೆ ಹಾಗೂ ವಯಸ್ಸಿನ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಎನ್​ಟಿಎ ಮಾಹಿತಿ ನೀಡಿದೆ.

ಮಂಗಳವಾರ (ಆ. 10) ನೀಟ್ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಮೊದಲು ನೀಟ್​ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ. 6ಕ್ಕೆ ನಿಗದಿ ಮಾಡಲಾಗಿತ್ತು. ಬಳಿಕ ಆ ದಿನಾಂಕವನ್ನು ಆ. 10ರವರೆಗೆ ವಿಸ್ತರಿಸಲಾಗಿತ್ತು.

ಇದನ್ನೂ ಓದಿ: NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

(NTA NEET Entrance Exam Application Process is here August 10 is Last Date for NEET 2021 Registration)

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ