AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ

ಮಕ್ಕಳಿಗೆ ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಪೌಷ್ಟಿಕಾಂಶ ತಜ್ಞರು ಹೇಳಿದ್ದಾರೆ.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 14, 2022 | 2:52 PM

Share

ಬೆಂಗಳೂರು: ನೂತನ ಶಿಕ್ಷಣ ನೀತಿ (New Education Policy – NEP) ಸಮಿತಿಯು ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡಬಾರದೆಂದು ಶಿಫಾರಸು ಮಾಡಿರುವುದು ಕರ್ನಾಟಕದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಶಿಫಾರಿಸು ವಿರೋಧಿಸಿ ಸಾಹಿತಿಗಳು, ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಟ್ಟೆ ಹಾಗೂ ಮಾಂಸದಿಂದ ಹಲವು ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿ ಅನುಸರಿಸಬೇಕೆಂದು ಸಮಿತಿ ಅಭಿಪ್ರಾಯಪಟ್ಟಿದೆ.

ಮೊಟ್ಟೆ ನೀಡಬಾರದು ಎಂದು ಎನ್​ಇಪಿ ಸಮಿತಿ ಶಿಫಾರಸು ಮಾಡಿದ್ದರೂ, ಬೆಂಗಳೂರಿನ ಪೋಷಕಾಂಶ ತಜ್ಞರು ಅದರಿಂದ ಹಲವು ಅನುಕೂಲಗಳಿವೆ ಎಂದೇ ವಾದಿಸುತ್ತಿದ್ದಾರೆ. ‘ಮಕ್ಕಳಿಗೆ ದಿನಕ್ಕೆ ಒಂದು ಮೊಟ್ಟೆ ನೀಡುವುದು ಒಳ್ಳೆಯದು. ಅದರಿಂದ ಅಪೌಷ್ಟಿಕತೆಯ ಕೊರತೆ ದೂರವಾಗುತ್ತದೆ. ಮೊಟ್ಟೆ ತಿನ್ನುವುದರಿಂದ ಮಕ್ಕಳಲ್ಲಿ ಕ್ಯಾಲ್ಸಿಯಂ ಮಟ್ಟವು ಸುಧಾರಿಸುತ್ತದೆ. ಮೂಳೆಗಳು ಸದೃಢವಾಗುತ್ತವೆ. ಆದರೆ ಮೊಟ್ಟೆಯನ್ನು ಸಂಪೂರ್ಣವಾಗಿ ಬೇಯಿಸಿಯೇ ಕೊಡಬೇಕು. ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ಅವರು ಹೇಳಿದ್ದಾರೆ.

ಪುಟ್ಟಣ್ಣ ವಿರೋಧ

ಸಮಿತಿಯ ಶಿಫಾರಸಿಗೆ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ‘ಮೊಟ್ಟೆ ಹಾಗೂ ಮಾಂಸ ದೇಹಕ್ಕೆ ಅತ್ಯಗತ್ಯವಾಗಿರುವ ಪೋಷಕಾಂಶಗಳನ್ನು ಒದಗಿಸುತ್ತವೆ. ಮಿದುಳಿನ ಬೆಳವಣಿಗೆಗೂ ಅದು ಸಹಾಯ ಮಾಡುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಹೀಗಾಗಿಯೇ ಸರ್ಕಾರವು ಮೊಟ್ಟೆಯನ್ನು ಬಿಸಿಯೂಟದಲ್ಲಿ ಸೇರಿಸಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ

ಇದೀಗ ನೂತನ ಶಿಕ್ಷಣ ನೀತಿ ಸಮಿತಿಯು ಮೊಟ್ಟೆ ಬೇಡ ಎಂದು ಶಿಫಾರಸ್ಸು ಮಾಡಿರುವುದು ಅವೈಜ್ಞಾನಿಕವಾಗಿದೆ. ಜನರ ಊಟದ ಪದ್ಧತಿ ಹೀಗೆಯೇ ಇರಬೇಕು ಎಂದು ಹೇರಲು ಸಮಿತಿಯು ಮುಂದಾಗಿದೆ. ನಮ್ಮ ದೇಶದಲ್ಲಿ ಅರ್ಧದಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಎನ್​ಇಪಿ ಸಮಿತಿಯ ಈ ಶಿಫಾರಸು ವಾಸ್ತವವನ್ನು ಅಣಕಿಸಿದಂತಿದೆ ಎಂದು ಹೇಳಿದ್ದಾರೆ. ಸಮಿತಿಯ ಶಿಫಾರಸಿನ ಬಗ್ಗೆ ನನ್ನ ಆಕ್ಷೇಪವನ್ನು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದು ಗಮನ ಸೆಳೆಯುತ್ತೇನೆ ಎಂದು ಹೇಳಿದರು.

Published On - 2:52 pm, Thu, 14 July 22

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್