Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ

ಮಕ್ಕಳಿಗೆ ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಪೌಷ್ಟಿಕಾಂಶ ತಜ್ಞರು ಹೇಳಿದ್ದಾರೆ.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 14, 2022 | 2:52 PM

ಬೆಂಗಳೂರು: ನೂತನ ಶಿಕ್ಷಣ ನೀತಿ (New Education Policy – NEP) ಸಮಿತಿಯು ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡಬಾರದೆಂದು ಶಿಫಾರಸು ಮಾಡಿರುವುದು ಕರ್ನಾಟಕದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಶಿಫಾರಿಸು ವಿರೋಧಿಸಿ ಸಾಹಿತಿಗಳು, ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಟ್ಟೆ ಹಾಗೂ ಮಾಂಸದಿಂದ ಹಲವು ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿ ಅನುಸರಿಸಬೇಕೆಂದು ಸಮಿತಿ ಅಭಿಪ್ರಾಯಪಟ್ಟಿದೆ.

ಮೊಟ್ಟೆ ನೀಡಬಾರದು ಎಂದು ಎನ್​ಇಪಿ ಸಮಿತಿ ಶಿಫಾರಸು ಮಾಡಿದ್ದರೂ, ಬೆಂಗಳೂರಿನ ಪೋಷಕಾಂಶ ತಜ್ಞರು ಅದರಿಂದ ಹಲವು ಅನುಕೂಲಗಳಿವೆ ಎಂದೇ ವಾದಿಸುತ್ತಿದ್ದಾರೆ. ‘ಮಕ್ಕಳಿಗೆ ದಿನಕ್ಕೆ ಒಂದು ಮೊಟ್ಟೆ ನೀಡುವುದು ಒಳ್ಳೆಯದು. ಅದರಿಂದ ಅಪೌಷ್ಟಿಕತೆಯ ಕೊರತೆ ದೂರವಾಗುತ್ತದೆ. ಮೊಟ್ಟೆ ತಿನ್ನುವುದರಿಂದ ಮಕ್ಕಳಲ್ಲಿ ಕ್ಯಾಲ್ಸಿಯಂ ಮಟ್ಟವು ಸುಧಾರಿಸುತ್ತದೆ. ಮೂಳೆಗಳು ಸದೃಢವಾಗುತ್ತವೆ. ಆದರೆ ಮೊಟ್ಟೆಯನ್ನು ಸಂಪೂರ್ಣವಾಗಿ ಬೇಯಿಸಿಯೇ ಕೊಡಬೇಕು. ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ಅವರು ಹೇಳಿದ್ದಾರೆ.

ಪುಟ್ಟಣ್ಣ ವಿರೋಧ

ಸಮಿತಿಯ ಶಿಫಾರಸಿಗೆ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ‘ಮೊಟ್ಟೆ ಹಾಗೂ ಮಾಂಸ ದೇಹಕ್ಕೆ ಅತ್ಯಗತ್ಯವಾಗಿರುವ ಪೋಷಕಾಂಶಗಳನ್ನು ಒದಗಿಸುತ್ತವೆ. ಮಿದುಳಿನ ಬೆಳವಣಿಗೆಗೂ ಅದು ಸಹಾಯ ಮಾಡುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಹೀಗಾಗಿಯೇ ಸರ್ಕಾರವು ಮೊಟ್ಟೆಯನ್ನು ಬಿಸಿಯೂಟದಲ್ಲಿ ಸೇರಿಸಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ

ಇದೀಗ ನೂತನ ಶಿಕ್ಷಣ ನೀತಿ ಸಮಿತಿಯು ಮೊಟ್ಟೆ ಬೇಡ ಎಂದು ಶಿಫಾರಸ್ಸು ಮಾಡಿರುವುದು ಅವೈಜ್ಞಾನಿಕವಾಗಿದೆ. ಜನರ ಊಟದ ಪದ್ಧತಿ ಹೀಗೆಯೇ ಇರಬೇಕು ಎಂದು ಹೇರಲು ಸಮಿತಿಯು ಮುಂದಾಗಿದೆ. ನಮ್ಮ ದೇಶದಲ್ಲಿ ಅರ್ಧದಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಎನ್​ಇಪಿ ಸಮಿತಿಯ ಈ ಶಿಫಾರಸು ವಾಸ್ತವವನ್ನು ಅಣಕಿಸಿದಂತಿದೆ ಎಂದು ಹೇಳಿದ್ದಾರೆ. ಸಮಿತಿಯ ಶಿಫಾರಸಿನ ಬಗ್ಗೆ ನನ್ನ ಆಕ್ಷೇಪವನ್ನು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದು ಗಮನ ಸೆಳೆಯುತ್ತೇನೆ ಎಂದು ಹೇಳಿದರು.

Published On - 2:52 pm, Thu, 14 July 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ