AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂತ ವೈದ್ಯಕೀಯ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ಒಂದು ವಾರ ಕಾಲಾವಕಾಶ ನೀಡಿದ ಕೇಂದ್ರ

ಈ ಹಿನ್ನೆಲೆಯಲ್ಲಿ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೌನ್ಸೆಲಿಂಗ್​ಗೆ ಅವಕಾಶ ಕೋರಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದರು. ಸುಧಾಕರ್ ಪತ್ರ ಆಧರಿಸಿ, ಇಂದಿನ ಒಂದು ವಾರಗಳ ಅವಧಿಗೆ ಕೌನ್ಸೆಲಿಂಗ್ ನಡೆಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ

ದಂತ ವೈದ್ಯಕೀಯ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ಒಂದು ವಾರ ಕಾಲಾವಕಾಶ ನೀಡಿದ ಕೇಂದ್ರ
ದಂತ ವೈದ್ಯಕೀಯ ಕೋರ್ಸ್
TV9 Web
| Edited By: |

Updated on: Jan 27, 2022 | 11:28 PM

Share

ಬೆಂಗಳೂರು: ದಂತ ವೈದ್ಯಕೀಯ ವಿದ್ಯಾರ್ಥಿಗಳ ಕೌನ್ಸೆಲಿಂಗ್ ಗೊಂದಲಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ. ಕೌನ್ಸೆಲಿಂಗ್​ಗೆ ಆರೋಗ್ಯ ಇಲಾಖೆಯು ಒಂದು ವಾರದ ಕಾಲಾವಕಾಶ ನೀಡಿದೆ. ನಾಳೆಯಿಂದ (ಜ.28) ಒಂದು ವಾರದ ಅವಧಿಗೆ ಕೌನ್ಸೆಲಿಂಗ್ ನಡೆಯಲಿದೆ. ವಿವಿಧ ಕಾರಣದಿಂದ ವಿಳಂಬವಾಗಿದ್ದ ದಂತ ವೈದ್ಯಕೀಯ ಕೌನ್ಸೆಲಿಂಗ್​ಗೆ ಹೆಚ್ಚಿನ ಕಾಲಾವಕಾಶ ಕೋರಿ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೌನ್ಸೆಲಿಂಗ್​ಗೆ ಅವಕಾಶ ಕೋರಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದರು. ಸುಧಾಕರ್ ಪತ್ರ ಆಧರಿಸಿ, ಇಂದಿನ ಒಂದು ವಾರಗಳ ಅವಧಿಗೆ ಕೌನ್ಸೆಲಿಂಗ್ ನಡೆಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕದಲ್ಲಿ 23 ಸಾವಿರ ಎಂಜಿನಿಯರಿಂಗ್‌ ಸೀಟು ಖಾಲಿ ಕರ್ನಾಟಕದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಬೇಡಿಕೆ ಕಡಿಮೆಯಾಗಿದೆ. 23 ಸಾವಿರ ಎಂಜಿನಿಯರಿಂಗ್‌ ಸೀಟ್ ಈ ವರ್ಷ ಖಾಲಿ ಉಳಿದಿದೆ. ಇದು ಹಿಂದಿನ ಐದು ವರ್ಷಗಳಲ್ಲೇ ಅತಿಹೆಚ್ಚು. ಕೋವಿಡ್‌ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಕೋರ್ಸ್​ಗೆ ಅರ್ಹತೆ ಪಡೆದಿದ್ದರು. ನೀಟ್‌ ಕೌನ್ಸೆಲಿಂಗ್ ಆರಂಭವಾದ ಬಳಿಕ ವೈದ್ಯಕೀಯ ಪದವಿ ಪಡೆಯುವ ಆಕಾಂಕ್ಷಿಗಳು ಎಂಜಿನಿಯರಿಂಗ್‌ ಕೋರ್ಸ್‌ ತೊರೆಯುವ ಸಾಧ್ಯತೆ ಹೆಚ್ಚಿದ್ದು, ಖಾಲಿ ಸೀಟುಗಳ ಸಂಖ್ಯೆ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಎಂಜಿನಿಯರಿಂಗ್‌ ಸೀಟುಗಳನ್ನು ಭರ್ತಿ ಮಾಡಲು ಮೂರು ಸುತ್ತಿನ ಕೌನ್ಸೆಲಿಂಗ್‌ ನಡೆಸಿದೆ. ಎರಡನೇ ಸುತ್ತಿನ ಬಳಿಕ, ಎಂಜಿನಿಯರಿಂಗ್‌ ಪ್ರವೇಶದ ಕೊನೆಯ ದಿನಾಂಕ ವಿಸ್ತರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಅನುಮತಿ ಪಡೆದಿತ್ತು. ಖಾಲಿ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲು ಮೂರನೇ ಸುತ್ತಿನ ಕೌನ್ಸೆಲಿಂಗ್‌ ಅನ್ನು 2021ರ ಡಿಸೆಂಬರ್‌ 31ರವರೆಗೆ ನಡೆಸಿತ್ತು. ಹಾಗಿದ್ದರೂ 23,001 ಸೀಟುಗಳು ಖಾಲಿ ಉಳಿದಿವೆ.

ಈ ವರ್ಷ ವಿದ್ಯಾರ್ಥಿಗಳಿಗೆ 64,484 ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದವು. ಇವುಗಳಲ್ಲಿ 48,027 ಸೀಟುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿದ್ದರು. ಆದರೆ, ಇವರಲ್ಲಿ 41,483 ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಕರ್ನಾಟಕದಲ್ಲಿ 11 ಸರ್ಕಾರಿ ಕಾಲೇಜುಗಳೂ ಸೇರಿ ಸುಮಾರು 230 ಎಂಜಿನಿಯರಿಂಗ್‌ ಕಾಲೇಜುಗಳಿವೆ.

ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಿಜಿ ಸೀಟ್ ಪಡೆಯಲು ಹತ್ತಾರು ಸಂಕಷ್ಟ; ಇದು ಖಾಸಗಿ ಕಾಲೇಜುಗಳಿಗೆ ಸೀಟು ಹಂಚುವ ದುರಾಲೋಚನೆಯೇ?

ಇದನ್ನೂ ಓದಿ: ನೀಟ್ ಪಿಜಿ ಸೀಟು ಹಂಚಿಕೆ ಆಪ್ಶನ್ ಎಂಟ್ರಿಗೆ ತಾಂತ್ರಿಕ ದೋಷ; ಅವಧಿ ವಿಸ್ತರಣೆ ಮಾಡುವಂತೆ ವೈದ್ಯಕೀಯ ವಿದ್ಯಾರ್ಥಿಗಳ ಪಟ್ಟು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್