AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಾತುರಿಯಲ್ಲಿ ರಾಜ್ಯದಲ್ಲಿ NEP ಜಾರಿ ವಿರೋಧಿಸಿ ಡಿ.​ 17ರಂದು ವಿಶ್ವವಿದ್ಯಾಲಯ ಬಂದ್​ಗೆ ಕರೆ: ಕೀರ್ತಿ ಗಣೇಶ್

ರಾಜ್ಯದಲ್ಲಿ ತರಾತುರಿಯಲ್ಲಿ ಎನ್​​ಇಪಿ ಜಾರಿ ಮಾಡಿದ್ದು, ಹಾಗಾಗಿ ಡಿಸೆಂಬರ್​ 17ರಂದು ರಾಜ್ಯದ ವಿಶ್ವವಿದ್ಯಾಲಯ ಬಂದ್​ಗೆ ಕರೆ ನೀಡಲಾಗಿದೆ.

ತರಾತುರಿಯಲ್ಲಿ ರಾಜ್ಯದಲ್ಲಿ NEP ಜಾರಿ ವಿರೋಧಿಸಿ  ಡಿ.​ 17ರಂದು ವಿಶ್ವವಿದ್ಯಾಲಯ ಬಂದ್​ಗೆ ಕರೆ: ಕೀರ್ತಿ ಗಣೇಶ್
ಎನ್ ಎಸ್ ಯು ಐ ಅಧ್ಯಕ್ಷ ಕೀರ್ತಿ ಗಣೇಶ್
TV9 Web
| Edited By: |

Updated on: Dec 05, 2022 | 3:01 PM

Share

ಬೆಂಗಳೂರು: ಭಾರತದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು (National Education Policy 2020) ಜಾರಿಗೆ ತಂದಿದೆ. ಸಾಕಷ್ಟು ವಿರೋಧದ ನಡುವೆಯೂ ಶಿಕ್ಷಣ ಇಲಾಖೆ NEP ಜಾರಿ ಮಾಡಿದೆ. ಇದಕ್ಕೆ ಕೇಂದ್ರ ಶಿಕ್ಷಣ ಇಲಾಖೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸದ್ಯ ಈ ಹೊಸ ಶಿಕ್ಷಣ ನೀತಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ತರಾತುರಿಯಲ್ಲಿ ಎನ್​​ಇಪಿ ಜಾರಿ ಮಾಡಿದ್ದು, ಹಾಗಾಗಿ ಡಿಸೆಂಬರ್​ 17ರಂದು ರಾಜ್ಯದ ವಿಶ್ವವಿದ್ಯಾಲಯ ಬಂದ್​ಗೆ ಕರೆ ನೀಡಲಾಗಿದೆ. ಈ ಕುರಿತಾಗಿ ಎನ್​​ಎಸ್​​​​ಯುಐ ಅಧ್ಯಕ್ಷ ಕೀರ್ತಿ ಗಣೇಶ್​ ಪ್ರತಿಕ್ರಿಯೆ ನೀಡಿದ್ದು, ಎನ್​​ಇಪಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿ ಮಾಡಿದ್ದಾರೆ. ಇದರ ಬಗ್ಗೆ ಯಾವುದೇ ಮಾಹಿತಿ ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಪ್ರಿನ್ಸಿಪಲ್​ರನ್ನು ಕೇಳಿದ್ರು ಮಾಹಿತಿ ಸಿಗ್ತಾ ಇಲ್ಲ. ನಾವು ಸರ್ಕಾರಿ ನೌಕರು ಅಂತಾರೆ ಪ್ರಿನ್ಸಿಪಲ್. ನಾವು ಯಾವುದರ ಬಗ್ಗೆ ‌ಮಾತನಾಡಲು ಆಗಲ್ಲ ಅಂತಾರೆ. ಯಾವುದೆ ಮುಂದಾಲೋಚನೆ ಇಲ್ಲದೆ ಎನ್​ಇಪಿ ಜಾರಿ ಮಾಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಹೇಳಿದರು.

ಅಲ್ಲದೆ ಸರಿಯಾದ ಸಮಯಕ್ಕೆ ಫಲಿತಾಂಶ ಬರುತ್ತಿಲ್ಲ. ಕೆಲವೊಂದು ಕೊರ್ಸಗಳ ಫಲಿತಾಂಶ ಒಂದು ವರ್ಷವಾದರೂ ಇನ್ನು ಬಂದಿಲ್ಲ. ಇದರ ಬಗ್ಗೆ ಸಚಿವರು ಗಮನ ಹರಿಸಬೇಕು. ಸ್ಕಾಲರ್ಶಿಪ್ ಶೀಪ್ ಕೂಡ ಇನ್ನೂ ಕೊಟ್ಟಿಲ್ಲ. ತಕ್ಷಣವೇ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದು ಕೀರ್ತಿ ಗಣೇಶ್ ಆಗ್ರಹಿಸಿದರು. ಜೊತೆಗೆ ಬಸ್​ಗಳ ವ್ಯವಸ್ಥೆ ಸರಿಯಾಗಬೇಕು. ಓವರ್ ಲೋಡ್ ಬಸ್​ಗಳು ಕಾಲೇಜಿಗೆ ಬರುತ್ತಿವೆ. ಇದರಿಂದ ಒಬ್ಬ ವಿದ್ಯಾರ್ಥಿ ಜೀವ ಹೋಗಿದೆ ಎಂದರು.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ಕೆ ಕೇಂದ್ರದಿಂದ ಗ್ರೀನ್ ಸಿಗ್ನಲ್, ಅಂಗನವಾಡಿಯಿಂದಲೇ ಆರಂಭ

ಸರ್ಕಾರಿ ಕಾಲೇಜುಗಳಲ್ಲಿ ಅತಿಯಾದ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆ. ಬಡವರ ಮಕ್ಕಳ ಫೀಜ್​ ಕಡಿಮೆ ಇರುತ್ತೆ ಅಂತ ಸರ್ಕಾರಿ ಕಾಲೇಜ್​ಗೆ ಬರ್ತಾರೆ. ನಮ್ಮ ಸಂಘಟನೆ ವತಿಯಿಂದ ಸಾಕಷ್ಟು ಭಾರಿ ಕಾಲೇಜ್ ಫೀಜ್​ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದೇವೆ. ಆದರೆ ಸರ್ಕಾರದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಮ್ಮ ಬೇಡಿಕೆಗಳು ಈಡೇರಬೇಕು. ವಿದ್ಯಾರ್ಥಿಗಳ ಬೇಡಿಕೆಗೆ ಎನ್​ಎಸ್​ಯುಐನಿಂದ ವಿವಿ ಬಂದ್ ಕರೆ ನೀಡಿದ್ದೇವೆ ಎಂದು ಕೀರ್ತಿ ಗಣೇಶ್ ತಿಳಿಸಿದರು.

ಅಂಗನವಾಡಿ ಹಂತದಿಂದಲೇ ಎನ್ಇಪಿ ಆರಂಭ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಸರ್ಕಾರ ಜಾರಿಗೊಳಿಸಿದೆ. ದೇಶದ ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಅದಕ್ಕಾಗಿ ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆ, ಬದಲಾವಣೆ ತರಲಿರುವ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ್ದು, ಇದೇ ವರ್ಷದಿಂದಲೇ ಎನ್‌ಇಪಿ-2020 ಜಾರಿಗೆ ಮುಂದಾಗಿದೆ.. ಪ್ರಾಥಮಿಕ ಹಂತದಲ್ಲಿ ರಾಜ್ಯದ ಅಂಗನವಾಡಿ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ಮುಂದಾಗಿದ್ದು ಕೇಂದ್ರ ಶಿಕ್ಷಣ ಇಲಾಖೆಯೂ ಇದಕ್ಕೆ ಅನುಮತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ