AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರು, ಪೋಷಕರ ವ್ಯಾಪಕ ವಿರೋಧ: 100 ರೂ. ದೇಣಿಗೆ ಸಂಗ್ರಹ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ

ಸಾರ್ವಜನಿಕರು, ಪೋಷಕರ ವಿರೋಧ ಹಿನ್ನೆಲೆ ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂ. ದೇಣಿಗೆ ಸಂಗ್ರಹ ಆದೇಶವನ್ನು ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.

ಸಾರ್ವಜನಿಕರು, ಪೋಷಕರ ವ್ಯಾಪಕ ವಿರೋಧ: 100 ರೂ. ದೇಣಿಗೆ ಸಂಗ್ರಹ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ
ಶಿಕ್ಷಣ ಇಲಾಖೆ
TV9 Web
| Edited By: |

Updated on:Oct 22, 2022 | 6:54 PM

Share

ಬೆಂಗಳೂರು: ಸಾರ್ವಜನಿಕರು, ಪೋಷಕರ ವಿರೋಧ ಹಿನ್ನೆಲೆ ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂ. ದೇಣಿಗೆ (Donation) ಸಂಗ್ರಹ ಆದೇಶವನ್ನು ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹಿಂಪಡೆಯಲಾಗಿದೆ. ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ (Education Department) ಮಹತ್ವದ ಸುತ್ತೋಲೆ ಹೊರಡಿಸಿತ್ತು. ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್​ಡಿಎಮ್​ಸಿಗಳಿಗೆ ಅವಕಾಶ ನೀಡಲಾಗಿತ್ತು. ಇದರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ತರೋಕೆ ಶಿಕ್ಷಣ ಸಚಿವರು ಹೊರಟ್ಟಿದ್ದಾರೆ. ಮೂರು ತಿಂಗಳಿಗೊಮ್ಮೆ ಪೋಷಕರು ಸಭೆಗೆ ಸಹ ಬರೋದಿಲ್ಲ. ಬಡ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಅಂತ ಪೋಷಕರ ಮಕ್ಕಳನ್ನ ತಂದು ಸರ್ಕಾರಿ ಶಾಲೆಗೆ ಬಿಡುತ್ತಾರೆ. ಇದೀಗ ಸರ್ಕಾರ ವಸೂಲಿಗೆ ಮುಂದಾದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರ ಸ್ಪಷ್ಟ ಉಲ್ಲಂಘನೆಯಿದೆ ಎಂದು ಕಿಡಿ ಕಾರಿದ್ದಾರೆ.

ವ್ಯಾಪಕ ಆಕ್ರೋಶ:

ಶಿಕ್ಷಣ ಇಲಾಖೆಯ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶಿಕ್ಷಣ ಇಲಾಖೆ ನಡೆಗೆ ಪೋಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದಲೂ ವಿರೋಧ ಕೇಳಿಬರುತ್ತಿದೆ. ಶಾಲೆಗಳ ಖಾಸಗಿರಣದ ಹುನ್ನಾರ ಎಂದು ಪೋಷಕರು ಕಿಡಿಕಾರಿದ್ದಾರೆ. ಮಕ್ಕಳ ಮೂಲಭೂತ ಶಿಕ್ಷಣ ಹಕ್ಕನ್ನು ಶಿಕ್ಷಣ ಇಲಾಖೆ ಕಿತ್ತುಕೊಳ್ಳಲು ಮುಂದಾಗಿದ್ದು, ಮಕ್ಕಳನ್ನ ಶಾಲೆಯಿಂದ ಹೊರ ಹಾಕುವ ಹುನ್ನಾರ ಇದು ಎಂದಿದ್ದಾರೆ. ಕರ್ನಾಟಕದ್ಯಾಂತ ಮುಂದಿನ ದಿನಗಳಲ್ಲಿ ಪೋಷಕರಿಂದ ಹೋರಾಟ ಮಾಡುತ್ತೇವೆ ಎಂದು ಪೋಷಕರ ಸಂಘಟನೆಯಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ.

ರಾಜ್ಯ ಸರ್ಕಾರ ಸುತ್ತೋಲೆ ವಾಪಸ್ ಪಡೆಯಬೇಕು: ಹೆಚ್​.ವಿಶ್ವನಾಥ್

ಇನ್ನು ಈ ವಿಚಾರವಾಗಿ ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್​.ವಿಶ್ವನಾಥ್ ಪ್ರತಿಕ್ರಿಯೆ ನೀಡುದ್ದು, ಸರ್ಕಾರಿ ಶಾಲೆಗಳ ನಿರ್ವಹಣೆಗೆ 100 ರೂಪಾಯಿ ಶುಲ್ಕ ಯಾಕೆ? ರಾಜ್ಯ ಸರ್ಕಾರ ತಕ್ಷಣ ಈ ಸುತ್ತೋಲೆ ವಾಪಸ್ ಪಡೆಯಬೇಕು ಎಂದರು. ಸರ್ಕಾರಿ ಶಾಲೆಯಲ್ಲಿ ಓದೋರು ಆರ್ಥಿಕವಾಗಿ ಹಿಂದುಳಿದವರು. ಇವತ್ತು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ. ಕನ್ನಡ ಶಾಲೆ ಮುಚ್ಚಲು ಏನು ಹುನ್ನಾರ ಆಗಬೇಕೋ ಅದು ಆಗುತ್ತಿದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:48 pm, Sat, 22 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ