ಭಾರತದಾದ್ಯಂತ ಶೈಕ್ಷಣಿಕ ಪ್ರವಾಸಕ್ಕೆ ಹೋಗಲಿರುವ ಜಮ್ಮು ಮತ್ತು ಕಾಶ್ಮೀರ ವಿಶ್ವವಿದ್ಯಾಲಯಗಳ 1100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು

|

Updated on: Jun 22, 2023 | 3:53 PM

ಕಾಲೇಜ್ ಆನ್ ವೀಲ್ಸ್: ಜಮ್ಮು ಮತ್ತು ಕಾಶ್ಮೀರದಿಂದ 1,100 ಮಹಿಳಾ ವಿದ್ಯಾರ್ಥಿಗಳು ಭಾರತದಾದ್ಯಂತ ಶೈಕ್ಷಣಿಕ ಪ್ರವಾಸಕ್ಕೆ ತೆರಳಲಿದ್ದಾರೆ.

ಭಾರತದಾದ್ಯಂತ ಶೈಕ್ಷಣಿಕ ಪ್ರವಾಸಕ್ಕೆ ಹೋಗಲಿರುವ ಜಮ್ಮು ಮತ್ತು ಕಾಶ್ಮೀರ ವಿಶ್ವವಿದ್ಯಾಲಯಗಳ 1100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು
ಸಾಂದರ್ಭಿಕ ಚಿತ್ರ
Image Credit source: (Representative image: Express photo by Prem nath Pandey
Follow us on

ಜಮ್ಮು ಮತ್ತು ಕಾಶ್ಮೀರದ (Jammu & Kashmir) ವಿವಿಧ ವಿಶ್ವವಿದ್ಯಾನಿಲಯಗಳ 1,100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ವರ್ಷದ ಕೊನೆಯಲ್ಲಿ ರಾಷ್ಟ್ರದಾದ್ಯಂತ ವಿವಿಧ ಸ್ಥಳಗಳಿಗೆ “ಕಾಲೇಜ್ ಆನ್ ವೀಲ್ಸ್” ಎಂದು ಕರೆಯಲ್ಪಡುವ ರೈಲು ಪ್ರಯಾಣವನ್ನು ಕೈಗೊಳ್ಳಲಿದ್ದಾರೆ ಎಂದು ಜಮ್ಮು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಉಮೇಶ್ ರೈ ತಿಳಿಸಿದ್ದಾರೆ. “ಇದು ಶೈಕ್ಷಣಿಕ ಪ್ರವಾಸ, ಸಂತೋಷದ ಪ್ರವಾಸವಲ್ಲ … ಅಕ್ಟೋಬರ್ ಅಂತ್ಯದಲ್ಲಿ ಅಥವಾ ನವೆಂಬರ್ ಆರಂಭದಲ್ಲಿ ನಡೆಯುವ ಪ್ರಯಾಣದ ಸಮಯದಲ್ಲಿ ಸ್ವಯಂ-ಆಯ್ಕೆ ಮಾಡಿದ ಯೋಜನೆಗಳಲ್ಲಿ ಕೆಲಸ ಮಾಡುವ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದೇವೆ. ಇವರಿಗೆ ಯಾವುದೇ ವೆಚ್ಚವನ್ನು ವಿಧಿಸಲಾಗುವುದಿಲ್ಲ” ಎಂದು ರೈ ಸುದ್ದಿಗಾರರಿಗೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಚೊಚ್ಚಲ ಭೇಟಿಗಾಗಿ ಆಗಮಿಸಲಿರುವ ಉಪಾಧ್ಯಕ್ಷ ಜಗದೀಪ್ ಧನಕರ್ ಅವರು ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 2016-19 ಮತ್ತು 2017-19 ಬ್ಯಾಚ್‌ಗಳ 265 ಚಿನ್ನದ ಪದಕಗಳು ಮತ್ತು 211 ಪಿಎಚ್‌ಡಿ ಪದವಿಗಳೊಂದಿಗೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ವಿಶ್ವವಿದ್ಯಾನಿಲಯದ ಕುಲಪತಿಯೂ ಆಗಿರುವ J&K ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ‘ಕಾಲೇಜು ಆನ್ ವೀಲ್ಸ್’ಗಾಗಿ ಮುಂಗಡವಾಗಿ ಹಣವನ್ನು ಬಿಡುಗಡೆ ಮಾಡಿದ್ದಕ್ಕಾಗಿ ರೈ ಶ್ಲಾಘಿಸಿದರು.

ಮುಂಬೈನ ಐಎನ್‌ಎಸ್ ವಿಕ್ರಾಂತ್ ಮತ್ತು ಗೋವಾದ ಶಿಪ್‌ಯಾರ್ಡ್ ಮತ್ತು ಡಾಕ್‌ಗಳಿಗೆ ವಿದ್ಯಾರ್ಥಿಗಳ ಭೇಟಿಗೆ ಅನುಕೂಲವಾಗುವಂತೆ ನಾವು ನೌಕಾಪಡೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಾವು ಈಗಾಗಲೇ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರೊಂದಿಗೆ ಮಾತನಾಡಿದ್ದೇವೆ, ವಿದ್ಯಾರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆಯ, ಸಂಶೋಧನಾ ಪ್ರಯೋಗಾಲಯಗಳ ಬಗ್ಗೆ ತಿಳಿಸುತ್ತಾರೆ ಎಂದು ಹೇಳಿದ್ದಾರೆ ,” ಎಂದು ರೈ ಹೇಳಿದರು. ವಿದ್ಯಾರ್ಥಿಗಳಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದೊಯ್ಯಲು ಅವಕಾಶ ನೀಡುವ ವಿಶ್ವವಿದ್ಯಾಲಯದ ಪ್ರಸ್ತಾವನೆಯನ್ನು ಇಸ್ರೋ ಅಧ್ಯಕ್ಷರು ಒಪ್ಪಿಕೊಂಡಿದ್ದಾರೆ ಎಂದು ರೈ ಹೇಳಿದರು.

“ಜಮ್ಮು ಮತ್ತು ಕಾಶ್ಮೀರದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಸೆಳೆಯಲಾಗುವುದು. ಮೊದಲು ಹುಡುಗಿಯರನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ರೈ ಹೇಳಿದರು. ಒಬ್ಬ ಮಾರ್ಗದರ್ಶಕರ ಮಾರ್ಗದರ್ಶನದಲ್ಲಿ 10 ವಿದ್ಯಾರ್ಥಿಗಳು ತಮ್ಮ ಭೇಟಿಯ ಪ್ರತಿ ಸ್ಥಳದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡುತ್ತಾರೆ. ರೈಲಿನ ಎರಡು ಬೋಗಿಗಳನ್ನು ಗ್ರಂಥಾಲಯಗಳಾಗಿ ಪರಿವರ್ತಿಸಲಾಗುವುದು.

ಇದನ್ನೂ ಓದಿ: ಜೆಇಇ ಅಡ್ವಾನ್ಸ್ಡ್​ನಲ್ಲಿ ಟಾಪ್ 100 ಅಭ್ಯರ್ಥಿಗಳಿಗೆ 10 ವಿಶೇಷ ವಿದ್ಯಾರ್ಥಿವೇತನ ನೀಡಲಿರುವ ಐಐಟಿ ಕಾನ್ಪುರ್

ಘಟಿಕೋತ್ಸವ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೈ, ವಿಶ್ವವಿದ್ಯಾನಿಲಯವು ಮತ್ತೊಂದು ವಿಶೇಷ ಘಟಿಕೋತ್ಸವವನ್ನು ನಡೆಸುತ್ತಿದೆ ಮತ್ತು ಬ್ಯಾಕ್‌ಲಾಗ್ ಪೂರ್ಣಗೊಳಿಸಲು ನಿಯಮಿತ ಘಟಿಕೋತ್ಸವವನ್ನು ನಡೆಸುತ್ತಿದೆ. ಘಟಿಕೋತ್ಸವ ವಿಳಂಬಕ್ಕೆ ಕಾರಣಗಳೇನೇ ಇರಲಿ, ಘಟಿಕೋತ್ಸವಗಳನ್ನು ನಿಯಮಿತವಾಗಿ ನಡೆಸುವಂತೆ ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ