AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಹೋದರ-ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’? 300 ಪದ ಮೀರದಂತೆ ಪ್ರಬಂಧ ಬರೆಯಿರಿ: ಪ್ರಶ್ನೆ ಪತ್ರಿಕೆ ವೈರಲ್

ಉಪನ್ಯಾಸಕನೊಬ್ಬ ಸಹೋದರ ಮತ್ತು ಸಹೋದರಿಯ ನಡುವಿನ ಅನೈತಿಕ ಸಂಬಂಧದ ಬಗ್ಗೆ ಪ್ರಬಂಧ ಬರೆಯುವಂತೆ ಪ್ರಶ್ನೆ ಕೇಳಿದ್ದಾನೆ. 300 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಿರಿ ಎಂದು ಕೇಳಿರುವ ಪ್ರಶ್ನೆ ಪತ್ರಿಕೆ ಇದೀಗ ಫುಲ್ ವೈರಲ್ ಆಗಿದೆ.

'ಸಹೋದರ-ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ'? 300 ಪದ ಮೀರದಂತೆ ಪ್ರಬಂಧ ಬರೆಯಿರಿ: ಪ್ರಶ್ನೆ ಪತ್ರಿಕೆ ವೈರಲ್
ಪ್ರಶ್ನೆ ಪತ್ರಿಕೆ
ರಮೇಶ್ ಬಿ. ಜವಳಗೇರಾ
|

Updated on:Feb 21, 2023 | 12:00 AM

Share

ಇಸ್ಲಾಮಾಬಾದ್: ಪ್ರೌಢಶಾಲಾ ಹಂತದಿಂದ ಸ್ನಾತಕೋತ್ತರ ಮತ್ತು ಅದಕ್ಕೂ ಮುಂದಿನ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುವ ರಚನಾ ಕಲೆಯೆಂದರೆ ಪ್ರಬಂಧ(essay) ಬರೆಯುವುದು.ಅದರಂತೆ ಶಾಲಾ-ಕಾಲೇಜುಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಪಿಡುಗುಗಳ ವಿಷಯಗಳ ಮೇಲೆ ಪ್ರಬಂಧ ಬರೆಯಲು ಶಿಕ್ಷಕರಾದವರು ಹೇಳುತ್ತಾರೆ. ಆದ್ರೆ, ಇಲ್ಲೋರ್ವ ಲೆಕ್ಚರರ್​ ‘ಸಹೋದರ ಹಾಗೂ ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’ ಎನ್ನುವ ಬಗ್ಗೆ ಪ್ರಬಂಧ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ (Students) ಹೇಳಿದ್ದಾನೆ. ಆದ್ರೆ, ಇದೀಗ ಆತನ ಕೆಲಸಕ್ಕೆ ಕುತ್ತು ಬಂದಿದೆ.

ಹೌದು…’ಸಹೋದರ ಹಾಗೂ ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’ ಎನ್ನುವ ಬಗ್ಗೆ ಪ್ರಬಂಧ ಬರೆಯಿರಿ ಎಂದಿದ್ದ ಉಪನ್ಯಾಸಕನನ್ನು ವಿಶ್ವವಿದ್ಯಾಲಯವು ವಜಾ ಮಾಡಿದೆ. ಇಸ್ಲಾಮಾಬಾದ್​ನಲ್ಲಿರುವ Comsats ವಿಶ್ವವಿದ್ಯಾಯಲದ ಬಿಇಇ ಮೊದಲ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಟೆಸ್ಟ್ (ಕಿರು ಪರೀಕ್ಷೆ) ತೆಗೆದುಕೊಂಡಿದ್ದು, ಸಹೋದರ ಮತ್ತು ಸಹೋದರಿ ಪ್ರೀತಿ ಮಾಡಬಹುದೇ? ಅಲ್ಲದೇ ಅವರು ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ ಎನ್ನುವ ಕುರಿತು 300 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಿರಿ ಎಂದು ಪ್ರಶ್ನೆ ಕೇಳಿದ್ದಾನೆ. ಈ ಪ್ರಶ್ನೆಗಳನ್ನು ನೋಡಿದ ವಿದ್ಯಾರ್ಥಿಗಳು ಶಾಕ್ ಆಗಿದ್ದಾರೆ.

ಬಳಿಕ ಈ ವಿಚಾರ ವಿವಿಯ ಹೆಚ್ಚುವರಿ ರಿಜಿಸ್ಟ್ರರ್ ನವೀದ್ ಅಹ್ಮದ್ ಖಾನ್ ಗಮನಕ್ಕೆ ಬಂದಿದ್ದು ಕೂಡಲೇ ಉಪನ್ಯಾಸಕನನ್ನು ​ಕರೆದು ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಲೆಕ್ಚರರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಹಾಗೂ ಪ್ರಶ್ನೆಯನ್ನು ಗೂಗಲ್‌ನಿಂದ ಕೃತಿಚೌರ್ಯ ಮಾಡಿರುವುದಾಗಿ ಹೇಳಿದ್ದಾನೆ. ಅಂತಿಮವಾಗಿ ಸಹೋದರ ಮತ್ತು ಸಹೋದರಿಯ ನಡುವಿನ ಅನೈತಿಕ ಸಂಬಂಧದ ಬಗ್ಗೆ ಪ್ರಬಂಧವನ್ನು ಬರೆಯಲು ಹೇಳಿದ್ದ ಉಪನ್ಯಾಸಕ ವಜಾಗೊಂಡಿದ್ದಾನೆ. ಇದೀಗ ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್​ ಆಗಿದೆ.

ಅಲ್ಲದೇ ಈ ರೀತಿಯ ಪ್ರಶ್ನೆ ಪ್ರತಿಕ್ರೆ ವೈರಲ್ ಆಗಿತ್ತಿದ್ದಂತೆಯೇ ಪಾಕಿಸ್ತಾನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದೆ.

Published On - 11:21 pm, Mon, 20 February 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ