AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಹೋದರ-ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’? 300 ಪದ ಮೀರದಂತೆ ಪ್ರಬಂಧ ಬರೆಯಿರಿ: ಪ್ರಶ್ನೆ ಪತ್ರಿಕೆ ವೈರಲ್

ಉಪನ್ಯಾಸಕನೊಬ್ಬ ಸಹೋದರ ಮತ್ತು ಸಹೋದರಿಯ ನಡುವಿನ ಅನೈತಿಕ ಸಂಬಂಧದ ಬಗ್ಗೆ ಪ್ರಬಂಧ ಬರೆಯುವಂತೆ ಪ್ರಶ್ನೆ ಕೇಳಿದ್ದಾನೆ. 300 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಿರಿ ಎಂದು ಕೇಳಿರುವ ಪ್ರಶ್ನೆ ಪತ್ರಿಕೆ ಇದೀಗ ಫುಲ್ ವೈರಲ್ ಆಗಿದೆ.

'ಸಹೋದರ-ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ'? 300 ಪದ ಮೀರದಂತೆ ಪ್ರಬಂಧ ಬರೆಯಿರಿ: ಪ್ರಶ್ನೆ ಪತ್ರಿಕೆ ವೈರಲ್
ಪ್ರಶ್ನೆ ಪತ್ರಿಕೆ
ರಮೇಶ್ ಬಿ. ಜವಳಗೇರಾ
|

Updated on:Feb 21, 2023 | 12:00 AM

Share

ಇಸ್ಲಾಮಾಬಾದ್: ಪ್ರೌಢಶಾಲಾ ಹಂತದಿಂದ ಸ್ನಾತಕೋತ್ತರ ಮತ್ತು ಅದಕ್ಕೂ ಮುಂದಿನ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುವ ರಚನಾ ಕಲೆಯೆಂದರೆ ಪ್ರಬಂಧ(essay) ಬರೆಯುವುದು.ಅದರಂತೆ ಶಾಲಾ-ಕಾಲೇಜುಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಪಿಡುಗುಗಳ ವಿಷಯಗಳ ಮೇಲೆ ಪ್ರಬಂಧ ಬರೆಯಲು ಶಿಕ್ಷಕರಾದವರು ಹೇಳುತ್ತಾರೆ. ಆದ್ರೆ, ಇಲ್ಲೋರ್ವ ಲೆಕ್ಚರರ್​ ‘ಸಹೋದರ ಹಾಗೂ ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’ ಎನ್ನುವ ಬಗ್ಗೆ ಪ್ರಬಂಧ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ (Students) ಹೇಳಿದ್ದಾನೆ. ಆದ್ರೆ, ಇದೀಗ ಆತನ ಕೆಲಸಕ್ಕೆ ಕುತ್ತು ಬಂದಿದೆ.

ಹೌದು…’ಸಹೋದರ ಹಾಗೂ ಸಹೋದರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ’ ಎನ್ನುವ ಬಗ್ಗೆ ಪ್ರಬಂಧ ಬರೆಯಿರಿ ಎಂದಿದ್ದ ಉಪನ್ಯಾಸಕನನ್ನು ವಿಶ್ವವಿದ್ಯಾಲಯವು ವಜಾ ಮಾಡಿದೆ. ಇಸ್ಲಾಮಾಬಾದ್​ನಲ್ಲಿರುವ Comsats ವಿಶ್ವವಿದ್ಯಾಯಲದ ಬಿಇಇ ಮೊದಲ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಟೆಸ್ಟ್ (ಕಿರು ಪರೀಕ್ಷೆ) ತೆಗೆದುಕೊಂಡಿದ್ದು, ಸಹೋದರ ಮತ್ತು ಸಹೋದರಿ ಪ್ರೀತಿ ಮಾಡಬಹುದೇ? ಅಲ್ಲದೇ ಅವರು ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದೇ ಎನ್ನುವ ಕುರಿತು 300 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಿರಿ ಎಂದು ಪ್ರಶ್ನೆ ಕೇಳಿದ್ದಾನೆ. ಈ ಪ್ರಶ್ನೆಗಳನ್ನು ನೋಡಿದ ವಿದ್ಯಾರ್ಥಿಗಳು ಶಾಕ್ ಆಗಿದ್ದಾರೆ.

ಬಳಿಕ ಈ ವಿಚಾರ ವಿವಿಯ ಹೆಚ್ಚುವರಿ ರಿಜಿಸ್ಟ್ರರ್ ನವೀದ್ ಅಹ್ಮದ್ ಖಾನ್ ಗಮನಕ್ಕೆ ಬಂದಿದ್ದು ಕೂಡಲೇ ಉಪನ್ಯಾಸಕನನ್ನು ​ಕರೆದು ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಲೆಕ್ಚರರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಹಾಗೂ ಪ್ರಶ್ನೆಯನ್ನು ಗೂಗಲ್‌ನಿಂದ ಕೃತಿಚೌರ್ಯ ಮಾಡಿರುವುದಾಗಿ ಹೇಳಿದ್ದಾನೆ. ಅಂತಿಮವಾಗಿ ಸಹೋದರ ಮತ್ತು ಸಹೋದರಿಯ ನಡುವಿನ ಅನೈತಿಕ ಸಂಬಂಧದ ಬಗ್ಗೆ ಪ್ರಬಂಧವನ್ನು ಬರೆಯಲು ಹೇಳಿದ್ದ ಉಪನ್ಯಾಸಕ ವಜಾಗೊಂಡಿದ್ದಾನೆ. ಇದೀಗ ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್​ ಆಗಿದೆ.

ಅಲ್ಲದೇ ಈ ರೀತಿಯ ಪ್ರಶ್ನೆ ಪ್ರತಿಕ್ರೆ ವೈರಲ್ ಆಗಿತ್ತಿದ್ದಂತೆಯೇ ಪಾಕಿಸ್ತಾನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದೆ.

Published On - 11:21 pm, Mon, 20 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ