AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕೆ ಖಾಸಗಿ ಶಾಲೆಯ ವಿರುದ್ಧ ದೂರು ದಾಖಲಿಸಿದ ಪೋಷಕರು

ನಗರದ ಖಾಸಗಿ ಶಾಲೆ ಕ್ರಿಸಾಲಿಸ್ ಹೈ ಐದನೇ ತರಗತಿ ಓದುತ್ತಿರುವ ತಮ್ಮ ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಶಾಲೆಯ ವಿರುದ್ಧ ದೂರು ದಾಖಲಿಸಿದ್ದಾರೆ.

Bengaluru: ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕೆ ಖಾಸಗಿ ಶಾಲೆಯ ವಿರುದ್ಧ ದೂರು ದಾಖಲಿಸಿದ ಪೋಷಕರು
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:Jun 06, 2023 | 10:51 AM

Share

ಬೆಂಗಳೂರು: ನಗರದ ಖಾಸಗಿ ಶಾಲೆ (Private School) ಕ್ರಿಸಾಲಿಸ್ ಹೈ (Chrysalis High) ಐದನೇ ತರಗತಿ ಓದುತ್ತಿರುವ ತಮ್ಮ ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಶಾಲೆಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಘಟನೆಯನ್ನು ವರದಿ ಮಾಡಲು ಪೋಷಕರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವನ್ನು (KSCPCR) ಸಂಪರ್ಕಿಸಿದರು. ದೂರಿನ ಪ್ರಕಾರ, “ಮಗಳನ್ನು ಮಧ್ಯಾಹ್ನ 3.20 ಕ್ಕೆ ಡ್ರಾಪ್ ಮಾಡಬೇಕಾಗಿತ್ತು, ಆದರೆ ಒಂದು ಗಂಟೆ ಕಳೆದರು ಮಗಳು ಮನೆಗೆ ತಲುಪದ್ದನ್ನು ಕಂಡು ಗಾಬರಿಗೊಂಡೆವು. ವಿಳಂಬದ ಬಗ್ಗೆ ಶಾಲೆಯಿಂದ ಯಾವುದೇ ಮಾಹಿತಿ ಇರಲಿಲ್ಲ. ಅಂತಿಮವಾಗಿ, ಸಂಜೆ 4.40 ರ ಸುಮಾರಿಗೆ ಅವರ ಮಗಳನ್ನು ಡ್ರಾಪ್ ಮಾಡಿದ್ದಾರೆ” ಎಂದು ಪೋಷಕರು ಹೇಳಿದ್ದಾರೆ.

ಪೋಷಕರೊಂದಿಗೆ ಮಗಳು ಮಾತನಾಡಿದಾಗ, ಶಾಲೆಯ ಸಿಬ್ಬಂದಿ ಬಾಲಕಿಯನ್ನು ರಸ್ತೆಯ ಇನ್ನೊಂದು ಬದಿಯಲ್ಲಿ ಇಳಿಸಲು ಹೇಳಿದ್ದು, ಅವಳು ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಇದಕ್ಕೆ ಶಿಕ್ಷೆಯಾಗಿ, ಸಿಬ್ಬಂದಿ ಬಾಲಕಿಯನ್ನು ಇತರ ಎಲ್ಲ ಮಕ್ಕಳನ್ನು ಮನೆಗೆ ಬಿಡುವವರೆಗೂ ಕಾಯುವಂತೆ ಮಾಡಿದರು. ಅಗಲವಾದ ದಾರಿ ಮತ್ತು ಡಿವೈಡರ್ ಇದ್ದ ಕಾರಣ ಮಗಳು ರಸ್ತೆ ದಾಟಲು ನಿರಾಕರಿಸಿದ್ದಾಳೆ ಎಂದು ಪೋಷಕರು ವಿವರಿಸಿದರು. ಈ ಕುರಿತು ಶಾಲೆಗೆ ಇಮೇಲ್ ಮಾಡಿದ ಬಳಿಕ ಶಾಲೆ ತಮ್ಮ ಮಗಳಿಗೆ ಸಾರಿಗೆಯನ್ನು ರದ್ದುಗೊಳಿಸಿದೆ ಎಂದು ಶಾಲೆ ತಿಳಿಸಿತು ಎಂದು ಪೋಷಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ದೇಶದ ಅತ್ಯುತ್ತಮ ಎಂಜಿನಿಯರಿಂಗ್ ವಿಶ್ವವಿದ್ಯಾನಿಲಯ ವಿಭಾಗದಲ್ಲಿ IISc ಬೆಂಗಳೂರಿಗೆ ಅಗ್ರಸ್ಥಾನ

ಆದಾಗ್ಯೂ, ಶಾಲೆಯ ವಕ್ತಾರರು ಈ ಎಲ್ಲಾ ಆರೋಪವನ್ನು ನಿರಾಕರಿಸಿದರು ಮತ್ತು ಮಕ್ಕಳ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಡೆಕ್ಕನ್ ಹೆರಾಲ್ಡ್ ವರದಿಯಲ್ಲಿ ಶಾಲೆಯ ಪ್ರಕಾರ, ಪೋಷಕರು ತಮ್ಮ ಮಗುವನ್ನು ಕರೆದುಕೊಂಡು ಹೋಗಲು ರಸ್ತೆ ದಾಟಲು ನಿರಾಕರಿಸಿದ್ದರು, ಎಲ್ಲಿಂದ ಮಗುವನ್ನು ಕರೆದುಕೊಂಡು ಹೋಗಿರುತ್ತಾರೋ ಅಲ್ಲಿಗೆ ತಂದು ಬಿಡಬೇಕು ಎಂದು ಹೇಳಿದರು, ಹೀಗಾಗಿ ಒಬ್ಬ ಅಟೆಂಡೆಂಟ್ ಬಾಲಕಿಯ ಇನ್ನೊಂದು ಬದಿಗೆ ಕರೆದುಕೊಂಡು ಹೋಗಿದ್ದಾರೆ. ಪೋಷಕರ ಮನವಿಯನ್ನು ಪಾಲಿಸುವುದರಿಂದ ಬಸ್‌ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ ಎಂದು ಶಾಲೆಯವರು ವಾದಿಸಿದರು. ಇದೀಗ ಶಾಲೆಯ ವಿರುದ್ಧ ಪೋಷಕರು ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 6 June 23

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ