AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕೆ ಖಾಸಗಿ ಶಾಲೆಯ ವಿರುದ್ಧ ದೂರು ದಾಖಲಿಸಿದ ಪೋಷಕರು

ನಗರದ ಖಾಸಗಿ ಶಾಲೆ ಕ್ರಿಸಾಲಿಸ್ ಹೈ ಐದನೇ ತರಗತಿ ಓದುತ್ತಿರುವ ತಮ್ಮ ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಶಾಲೆಯ ವಿರುದ್ಧ ದೂರು ದಾಖಲಿಸಿದ್ದಾರೆ.

Bengaluru: ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕೆ ಖಾಸಗಿ ಶಾಲೆಯ ವಿರುದ್ಧ ದೂರು ದಾಖಲಿಸಿದ ಪೋಷಕರು
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ನಯನಾ ಎಸ್​ಪಿ
|

Updated on:Jun 06, 2023 | 10:51 AM

Share

ಬೆಂಗಳೂರು: ನಗರದ ಖಾಸಗಿ ಶಾಲೆ (Private School) ಕ್ರಿಸಾಲಿಸ್ ಹೈ (Chrysalis High) ಐದನೇ ತರಗತಿ ಓದುತ್ತಿರುವ ತಮ್ಮ ಮಗಳನ್ನು ತಡವಾಗಿ ಮನೆಗೆ ಬಿಟ್ಟಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಶಾಲೆಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಘಟನೆಯನ್ನು ವರದಿ ಮಾಡಲು ಪೋಷಕರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವನ್ನು (KSCPCR) ಸಂಪರ್ಕಿಸಿದರು. ದೂರಿನ ಪ್ರಕಾರ, “ಮಗಳನ್ನು ಮಧ್ಯಾಹ್ನ 3.20 ಕ್ಕೆ ಡ್ರಾಪ್ ಮಾಡಬೇಕಾಗಿತ್ತು, ಆದರೆ ಒಂದು ಗಂಟೆ ಕಳೆದರು ಮಗಳು ಮನೆಗೆ ತಲುಪದ್ದನ್ನು ಕಂಡು ಗಾಬರಿಗೊಂಡೆವು. ವಿಳಂಬದ ಬಗ್ಗೆ ಶಾಲೆಯಿಂದ ಯಾವುದೇ ಮಾಹಿತಿ ಇರಲಿಲ್ಲ. ಅಂತಿಮವಾಗಿ, ಸಂಜೆ 4.40 ರ ಸುಮಾರಿಗೆ ಅವರ ಮಗಳನ್ನು ಡ್ರಾಪ್ ಮಾಡಿದ್ದಾರೆ” ಎಂದು ಪೋಷಕರು ಹೇಳಿದ್ದಾರೆ.

ಪೋಷಕರೊಂದಿಗೆ ಮಗಳು ಮಾತನಾಡಿದಾಗ, ಶಾಲೆಯ ಸಿಬ್ಬಂದಿ ಬಾಲಕಿಯನ್ನು ರಸ್ತೆಯ ಇನ್ನೊಂದು ಬದಿಯಲ್ಲಿ ಇಳಿಸಲು ಹೇಳಿದ್ದು, ಅವಳು ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಇದಕ್ಕೆ ಶಿಕ್ಷೆಯಾಗಿ, ಸಿಬ್ಬಂದಿ ಬಾಲಕಿಯನ್ನು ಇತರ ಎಲ್ಲ ಮಕ್ಕಳನ್ನು ಮನೆಗೆ ಬಿಡುವವರೆಗೂ ಕಾಯುವಂತೆ ಮಾಡಿದರು. ಅಗಲವಾದ ದಾರಿ ಮತ್ತು ಡಿವೈಡರ್ ಇದ್ದ ಕಾರಣ ಮಗಳು ರಸ್ತೆ ದಾಟಲು ನಿರಾಕರಿಸಿದ್ದಾಳೆ ಎಂದು ಪೋಷಕರು ವಿವರಿಸಿದರು. ಈ ಕುರಿತು ಶಾಲೆಗೆ ಇಮೇಲ್ ಮಾಡಿದ ಬಳಿಕ ಶಾಲೆ ತಮ್ಮ ಮಗಳಿಗೆ ಸಾರಿಗೆಯನ್ನು ರದ್ದುಗೊಳಿಸಿದೆ ಎಂದು ಶಾಲೆ ತಿಳಿಸಿತು ಎಂದು ಪೋಷಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ದೇಶದ ಅತ್ಯುತ್ತಮ ಎಂಜಿನಿಯರಿಂಗ್ ವಿಶ್ವವಿದ್ಯಾನಿಲಯ ವಿಭಾಗದಲ್ಲಿ IISc ಬೆಂಗಳೂರಿಗೆ ಅಗ್ರಸ್ಥಾನ

ಆದಾಗ್ಯೂ, ಶಾಲೆಯ ವಕ್ತಾರರು ಈ ಎಲ್ಲಾ ಆರೋಪವನ್ನು ನಿರಾಕರಿಸಿದರು ಮತ್ತು ಮಕ್ಕಳ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಡೆಕ್ಕನ್ ಹೆರಾಲ್ಡ್ ವರದಿಯಲ್ಲಿ ಶಾಲೆಯ ಪ್ರಕಾರ, ಪೋಷಕರು ತಮ್ಮ ಮಗುವನ್ನು ಕರೆದುಕೊಂಡು ಹೋಗಲು ರಸ್ತೆ ದಾಟಲು ನಿರಾಕರಿಸಿದ್ದರು, ಎಲ್ಲಿಂದ ಮಗುವನ್ನು ಕರೆದುಕೊಂಡು ಹೋಗಿರುತ್ತಾರೋ ಅಲ್ಲಿಗೆ ತಂದು ಬಿಡಬೇಕು ಎಂದು ಹೇಳಿದರು, ಹೀಗಾಗಿ ಒಬ್ಬ ಅಟೆಂಡೆಂಟ್ ಬಾಲಕಿಯ ಇನ್ನೊಂದು ಬದಿಗೆ ಕರೆದುಕೊಂಡು ಹೋಗಿದ್ದಾರೆ. ಪೋಷಕರ ಮನವಿಯನ್ನು ಪಾಲಿಸುವುದರಿಂದ ಬಸ್‌ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ ಎಂದು ಶಾಲೆಯವರು ವಾದಿಸಿದರು. ಇದೀಗ ಶಾಲೆಯ ವಿರುದ್ಧ ಪೋಷಕರು ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Tue, 6 June 23

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ