AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pariksha Pe Charcha 2023: ಪರೀಕ್ಷಾ ಪೆ ಚರ್ಚಾ ಆರಂಭ: ಇದು ನನ್ನ ಪರೀಕ್ಷೆ ಎಂದ ಪ್ರಧಾನಿ ಮೋದಿ

Pariksha Pe Charcha 2023 PM Modi Live Interaction Updates: ನನ್ನ ದೇಶದ ಯುವಮನಸ್ಸುಗಳು ಏನು ಯೋಚಿಸುತ್ತಿವೆ ಎಂದು ತಿಳಿಯಲು ಪರೀಕ್ಷಾ ಪೆ ಚರ್ಚಾ ಉತ್ತಮ ಅವಕಾಶ ಎಂದು ಹೇಳಿದರು.

Pariksha Pe Charcha 2023: ಪರೀಕ್ಷಾ ಪೆ ಚರ್ಚಾ ಆರಂಭ: ಇದು ನನ್ನ ಪರೀಕ್ಷೆ ಎಂದ ಪ್ರಧಾನಿ ಮೋದಿ
ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
TV9 Web
| Edited By: |

Updated on:Jan 27, 2023 | 11:22 AM

Share

ದೆಹಲಿ: ಪರೀಕ್ಷಾ ಪೆ ಚರ್ಚಾ (Pariksha Pe Charcha 2023) ಎನ್ನುವುದು ನನ್ನ ಪರೀಕ್ಷೆಯೂ ಹೌದು. ದೇಶದ ಕೋಟ್ಯಂತರ ವಿದ್ಯಾರ್ಥಿಗಳು ನನ್ನ ಮೌಲ್ಯಮಾಪನ ಮಾಡುತ್ತಾರೆ. ಇದು ನನಗೆ ಖುಷಿಯ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬಹುನಿರೀಕ್ಷಿತ ‘ಪರೀಕ್ಷಾ ಪೆ ಚರ್ಚಾ’ದ 6ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ನನ್ನ ದೇಶದ ಯುವಮನಸ್ಸುಗಳು ಏನು ಯೋಚಿಸುತ್ತಿವೆ ಎಂದು ತಿಳಿಯಲು, ಅವರು ಸರ್ಕಾರಗಳಿಂದ ಏನು ನಿರೀಕ್ಷಿಸುತ್ತಿದ್ದಾರೆ ಎನ್ನುವುದನ್ನು ಅರಿಯಲು ಇದು ನನಗೆ ಅತ್ಯುತ್ತಮ ಖಜಾನೆಯಾಗಿದೆ ಎಂದು ಹೇಳಿದರು.

‘ಪರೀಕ್ಷಾ ಪೆ ಚರ್ಚಾಗೆ ಬರುವ ಎಲ್ಲ ಪ್ರಶ್ನೆಗಳನ್ನು ಒಂದುಕಡೆ ಹುಷಾರಾಗಿ ಇರಿಸುವಂತೆ ನನ್ನ ಕಚೇರಿಗೆ ನಾನು ಸೂಚನೆ ನೀಡಿದ್ದೇನೆ. ಮುಂದೆ ಸಮಯಾವಕಾಶವಾದಾಗ ಸಮಾಜ ವಿಜ್ಞಾನಿಗಳು ಇದನ್ನು ವಿಶ್ಲೇಷಿಸಲಿದ್ದಾರೆ’ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ‘ಭಾರತದ ವಿದ್ಯಾರ್ಥಿಯು ಇಂದು ವಿಶ್ವದಲ್ಲಿ ಏನೆಲ್ಲಾ ಆಗುತ್ತಿದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳುತ್ತಿದ್ದಾನೆ. ವಿಶ್ವದ ಪರಿಸರ, ತಂತ್ರಜ್ಞಾನದ ಬಗ್ಗೆಯೂ ಯೋಚಿಸುತ್ತಾನೆ. ಇದು ಸಾಧ್ಯವಾಗಬೇಕು ಎನ್ನುವುದು ಪ್ರಧಾನಿಗಳ ಚಿಂತನೆಯಾಗಿತ್ತು. ಪರೀಕ್ಷಾ ಪೆ, ಎಕ್ಸಾಂ ವಾರಿಯರ್​ಗಳು ಇಂಥ ಕ್ರಮದ ಭಾಗವೇ ಆಗಿವೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಭಾರತದ ವಿದ್ಯಾರ್ಥಿ ಕೇವಲ ಶಿಕ್ಷಣದ ಬಗ್ಗೆಯಷ್ಟೇ ಯೋಚಿಸುವುದಿಲ್ಲ’ ಎಂದು ಹೇಳಿದರು.

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಈ ಬಾರಿ ಸುಮಾರು 38.8 ಲಕ್ಷ ಮಕ್ಕಳು, 155 ವಿವಿಧ ದೇಶಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಇಂದು ಸಂಜೆ 7ಕ್ಕೆ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ; ನೀವೂ ವೀಕ್ಷಿಸಬಹುದು- ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಪರೀಕ್ಷಾ ಪೆ ಚರ್ಚಾ ಕುರಿತ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 27 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್