AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: SSLC, ದ್ವಿತೀಯ PUC ಪಾಸಿಂಗ್ ಮಾರ್ಕ್ಸ್ ಕಡಿತ

2025-26ನೇ ಸಾಲಿನ SSLC ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್​ ನ್ಯೂಸ್​ ಕೊಟ್ಟಿದೆ. ತೇರ್ಗಡೆ ಅಂಕದಲ್ಲಿ ಕಡಿತ ಮಾಡಲಾಗಿದ್ದು, ಪ್ರಸಕ್ತ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದೆ. ಪಾಸಿಂಗ್ ಮಾರ್ಕ್ಸ್ ಕಡಿತದ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿಯೇ ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: SSLC, ದ್ವಿತೀಯ PUC ಪಾಸಿಂಗ್ ಮಾರ್ಕ್ಸ್ ಕಡಿತ
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು. (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 15, 2025 | 1:11 PM

Share

ಬೆಂಗಳೂರು, ಅಕ್ಟೋಬರ್​ 15: 2025-26ನೇ ಸಾಲಿನ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್​ ನ್ಯೂಸ್​ ಕೊಟ್ಟಿದೆ. ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕ ಮತ್ತು SSLCಯಲ್ಲಿ 625ಕ್ಕೆ ಕನಿಷ್ಠ 206 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಇನ್ನು ತೇರ್ಗಡೆ ಆಗಲಿದ್ದಾರೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಹೊಸ ನಿಯಮದ ಪ್ರಕಾರ ಲಿಖಿತ ಹಾಗೂ ಆಂತರಿಕ ಅಂಕ ಸೇರಿ ಪಿಯುಸಿಯಲ್ಲಿ ಪ್ರತಿ ವಿಷಯದಲ್ಲೂ ಕನಿಷ್ಠ 30 ಅಂಕ ಕಡ್ಡಾಯವಾಗಿರಲಿದೆ. SSLC ಪರೀಕ್ಷೆಯಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕ ಪಡೆದರೆ ವಿದ್ಯಾರ್ಥಿಗಳು ತೇರ್ಗಡ ಆಗಲಿದ್ದಾರೆ.

ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆ ಪೈಕಿ ಶೇಕಡಾ 33ರಷ್ಟು ಪರವಾಗಿ 701 ಪತ್ರ ಮತ್ತು ಶೇ.35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025-26ನೇ ಸಾಲಿನಿಂದ SSLCಯಲ್ಲಿ ಪ್ರಥಮ ಭಾಷೆ ಹೊರತುಪಡಿಸಿ ಶೇ. 33 ಫಲಿತಾಂಶ ಬಂದರೆ ವಿದ್ಯಾರ್ಥಿಗಳು ಪಾಸ್​ ಆಗಲಿದ್ದಾರೆ. ಪ್ರಥಮ ಭಾಷೆ ಗರಿಷ್ಠ ಅಂಕವನ್ನು 125ರಿಂದ 100ಕ್ಕೆ ಇಳಿಸುವ ವಿಚಾರದ ಬಗ್ಗೆಯೂ ಚರ್ಚೆಯಾಗಿದ್ದು, ಇದು ಇನ್ನೂ ಅಂತಿಮವಾಗಿಲ್ಲ. ಸಾರ್ವಜನಿಕರ ಅಭಿಪ್ರಾಯ ಪಡೆದೇ ಈ ಬಗ್ಗೆ ತೀರ್ಮಾನಿಸಲಾಗುತ್ತೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪೆಟ್ಟು: 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ನೂತನ ನಿಯಮವು ಜಾರಿಗೆ ಬರಲಿದ್ದು, ಪರೀಕ್ಷೆಗೆ ಹಾಜರಾಗುವ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾಥಿಗಳಿಬ್ಬರಿಗೂ ಅನ್ವಯವಾಗಲಿದೆ. ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್​ ಸಿ ಹಾಗೂ ನೆರೆ ರಾಜ್ಯಗಳಲ್ಲಿರುವ ಮಾನದಂಡಗಳನ್ನು ನಮ್ಮಲ್ಲೂ ಜಾರಿಗೆ ತರುವ ಉದ್ದೇಶದ ಹಿನ್ನಲೆ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಹೊಸ ನಿಯಮದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು SSLC ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್