AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foreign Universities: ಭಾರತದಲ್ಲಿ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಂದು ಹೆಜ್ಜೆ ಮುಂದಿಟ್ಟ ಪ್ರಧಾನಿ ಮೋದಿ

ಭಾರತದಲ್ಲಿ ಆಕ್ಸ್​ಫರ್ಡ್​, ಯೇಲ್​, ಸ್ಟ್ಯಾನ್‌ಫೋರ್ಡ್‌ನಂತಹ ಪ್ರತಿಷ್ಠಿತ ವಿದೇಶಿ  ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಒಂದು ಹೆಜ್ಜೆ ಮುಂದಿರಿಸಿದ್ದಾರೆ.

Foreign Universities: ಭಾರತದಲ್ಲಿ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಂದು ಹೆಜ್ಜೆ ಮುಂದಿಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jan 06, 2023 | 2:22 PM

Share

ಭಾರತದಲ್ಲಿ ಆಕ್ಸ್​ಫರ್ಡ್​, ಯೇಲ್​, ಸ್ಟ್ಯಾನ್‌ಫೋರ್ಡ್‌ನಂತಹ ಪ್ರತಿಷ್ಠಿತ ವಿದೇಶಿ  ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಒಂದು ಹೆಜ್ಜೆ ಮುಂದಿರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಕ್ಯಾಂಪಸ್‌ಗಳನ್ನು ತೆರೆಯಲು ವಿಶ್ವವಿಖ್ಯಾತ ವಿಶ್ವವಿದ್ಯಾಲಯಗಳನ್ನು ಆಕರ್ಷಿಸಲು ಪ್ರಯತ್ನಿಸುತ್ತಿದೆ. ಯೇಲ್, ಆಕ್ಸ್‌ಫರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಂತಹ ಪ್ರಮುಖ ವಿದೇಶಿ ವಿಶ್ವವಿದ್ಯಾಲಯಗಳಿಗೆ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ಮತ್ತು ಪದವಿಗಳನ್ನು ನೀಡಲು ಭಾರತವು ಒಂದು ಹೆಜ್ಜೆ ಮುಂದಿಟ್ಟಿದೆ.

ಭಾರತವು ತನ್ನ ವಿಶ್ವವಿದ್ಯಾನಿಲಯಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳ ತರಲು ಪ್ರಯತ್ನ ನಡೆಸುತ್ತಿದೆ. ಭಾರತೀಯ ವಿದ್ಯಾರ್ಥಿಗಳು ಕೈಗೆಟುಕುವ ವೆಚ್ಚದಲ್ಲಿ ವಿದೇಶಿ ವಿದ್ಯಾರ್ಹತೆಗಳನ್ನು ಪಡೆಯಲು ಮತ್ತು ಭಾರತವನ್ನು ಆಕರ್ಷಕ ಜಾಗತಿಕ ಅಧ್ಯಯನ ತಾಣವನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪ್ರಯತ್ನಿಸುತ್ತಿದೆ.

ಭಾರತದ ವಿಶ್ವವಿದ್ಯಾನಿಲಯಗಳಿಂದ, ಮೈಕ್ರೋಸಾಫ್ಟ್‌ನಿಂದ ಗೂಗಲ್‌ನ ಸಿಇಒವರೆಗೆ ಹೊರಬಂದಿದ್ದಾರೆ. ಈಗ ಪ್ರಧಾನಿ ಮೋದಿ ಅವರು ಯೇಲ್, ಆಕ್ಸ್‌ಫರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಂತಹ ವಿಶ್ವದ ಪ್ರಸಿದ್ಧ ವಿಶ್ವವಿದ್ಯಾಲಯಗಳು ಭಾರತದಲ್ಲಿ ತಮ್ಮ ಕ್ಯಾಂಪಸ್‌ಗಳನ್ನು ತೆರೆಯಬೇಕು, ಇದರಿಂದ ಭಾರತೀಯ ವಿಶ್ವವಿದ್ಯಾಲಯಗಳು ಅವರೊಂದಿಗೆ ಸ್ಪರ್ಧಿಸಬಹುದು ಎನ್ನುವ ಆಲೋಚನೆ ಮಾಡಿದೆ.

ಕೆಲವು ವಿದೇಶಿ ವಿಶ್ವವಿದ್ಯಾಲಯಗಳು ಈಗಾಗಲೇ ಭಾರತೀಯ ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದಿವೆ. ಕೆಲವು ವಿಶ್ವವಿದ್ಯಾನಿಲಯಗಳು ಈಗಾಗಲೇ ಭಾರತೀಯ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಹೊಂದಿವೆ, ವಿದ್ಯಾರ್ಥಿಗಳು ಭಾರತದಲ್ಲಿ ಭಾಗಶಃ ಅಧ್ಯಯನ ಮಾಡಲು ಮತ್ತು ವಿದೇಶದಲ್ಲಿ ಮುಖ್ಯ ಕ್ಯಾಂಪಸ್‌ನಲ್ಲಿ ತಮ್ಮ ಪದವಿಗಳನ್ನು ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ ಕ್ರಮವು ಈ ಸಾಗರೋತ್ತರ ಸಂಸ್ಥೆಗಳನ್ನು ಸ್ಥಳೀಯ ಪಾಲುದಾರರಿಲ್ಲದೆ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸುತ್ತದೆ.

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಅಂತಿಮ ಕರಡನ್ನು ಕಾನೂನಾಗುವ ಮೊದಲು ಅದರ ಅನುಮೋದನೆಗಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು. ಈಗ ಈ ವಿದೇಶಿ ಸಂಸ್ಥೆಗಳು ಉತ್ಸುಕವಾಗಿವೆ ಮತ್ತು ಯಾವುದೇ ಸ್ಥಳೀಯ ಪಾಲುದಾರರಿಲ್ಲದೆ ಭಾರತದಲ್ಲಿ ತಮ್ಮ ಕ್ಯಾಂಪಸ್‌ಗಳನ್ನು ತೆರೆಯಲು ಬಯಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್